ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಚಭೂತಗಳಲ್ಲಿ ಲೀನರಾದ ಗಾಯಕ ಕೆಕೆ

Last Updated 2 ಜೂನ್ 2022, 10:49 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್‌ನ ಖ್ಯಾತ ಗಾಯಕ ಕೃಷ್ಣಕುಮಾರ್‌ ಕುನ್ನತ್‌(ಕೆಕೆ) ಅವರ ಅಂತ್ಯ ಸಂಸ್ಕಾರ ಹಿಂದೂ ಸಂಪ್ರದಾಯದಂತೆ ಗುರುವಾರ ನೆರವೇರಿತು.

ಇಲ್ಲಿನ ಹಿಂದೂ ರುದ್ರಭೂಮಿಯಲ್ಲಿ ಕೆಕೆ ಅವರ ಕುಟುಂಬದವರು, ಆಪ್ತರು, ಗೆಳೆಯರು, ಸಿನಿಮಾರಂಗದ ಗಣ್ಯರು, ಅಭಿಮಾನಿಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.

ಕೆಕೆ ಅವರ ಪುತ್ರ ನಕುಲ್‌ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಅಂತಿಮ ಸಂಸ್ಕಾರಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಕೆಕೆ ಅವರ ಪತ್ನಿ ಜ್ಯೋತಿ ಹಾಜರಿದ್ದರು.

ಬುಧವಾರ ಶವಪರೀಕ್ಷೆಯ ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಹೃದಯಸ್ತಂಭನದಿಂದ ಸಾವು ಸಂಭವಿಸಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

'ಮಯೋಕಾರ್ಡಿಯಲ್‌ ಇನ್‌ಫ್ರಾಕ್ಷನ್‌ ಕಾರಣದಿಂದ ಗಾಯಕ ಕೆಕೆ ಮೃತಪಟ್ಟಿದ್ದಾರೆ. ಸಾವಿನ ಹಿಂದೆ ಯಾವುದೇ ಅಸಹಜ ಕಾರಣಗಳಿಲ್ಲ. ವೈದ್ಯಕೀಯ ಪರೀಕ್ಷೆಯಲ್ಲೂ ಕೆಕೆ ಅವರಿಗೆ ಸುದೀರ್ಘವಾದ ಹೃದಯ ಸಮಸ್ಯೆಗಳು ಕಂಡುಬಂದಿವೆ ಎಂದು ಪೊಲೀಸರು ಹೇಳಿದ್ದಾರೆ.

ಕೆಕೆ ಅವರು ಅನಾರೋಗ್ಯದಿಂದ ಮಂಗಳವಾರರಾತ್ರಿ ನಿಧನರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT