<p>ಮಲಯಾಳದ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದಲ್ಲಿ ‘ಕಲಕಾತ..’ ಎಂಬ ಹಾಡೊಂದನ್ನು ಹಳ್ಳಿಯೊಂದರ ವೃದ್ಧೆ ನಂಜಿಯಮ್ಮ ಹಾಡಿದ್ದರು. ಇದು ಸಾಕಷ್ಟು ಜನಪ್ರಿಯವಾಗಿತ್ತು. ಇದೀಗ ಕನ್ನಡದಲ್ಲೂ ಇಂತಹ ಪ್ರಯತ್ನವೊಂದು ನಡೆದಿದೆ. </p>.<p>ಗಾಯಕನಾಗಿ ಗುರುತಿಸಿಕೊಂಡಿರುವ ನವೀನ್ ಸಜ್ಜು ನಾಯಕನಾಗಿ ನಟಿಸಿರುವ ಮೊದಲ ಚಿತ್ರ ‘ಲೋ ನವೀನ’ ರಿಲೀಸ್ಗೆ ಸಜ್ಜಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ‘ಕೋಣಾಣೆ’ ಎಂಬ ಹಾಡು ಬಿಡುಗಡೆಯಾಗಿದೆ. ಅಪ್ಪಟ ಜನಪದ ಶೈಲಿಯ ಈ ಹಾಡನ್ನು ಮೈಸೂರಿನ ಎಚ್.ಡಿ.ಕೋಟೆಯ ಚಮ್ಮಮ್ಮ ಹಾಗೂ ಲಕ್ಷ್ಮಮ್ಮ ಎಂಬುವವರು ಹಾಡಿದ್ದಾರೆ. ನವೀನ್ ಸಜ್ಜು ಕೂಡಾ ಗಾಯನಕ್ಕೆ ಜೊತೆಯಾಗಿದ್ದಾರೆ.</p>.<p>‘ಮೂಲತಃ ಮಳವಳ್ಳಿಯವನಾದ ನಾನು, ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದೆ. ನಾನು, ಸುನೀಲ್ ಮೈಸೂರು ಹಾಗೂ ಅನೇಕ ಸ್ನೇಹಿತರು ಸೇರಿ ಮನರಂಜನೆಯೇ ಪ್ರಧಾನವಾಗಿರುವ ಈ ಚಿತ್ರದ ಕಥೆ ಬರೆದಿದ್ದೇವೆ. ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ನಾನೇ ಸಂಗೀತ ಸಂಯೋಜಿಸಿರುವ ಐದು ಹಾಡುಗಳು ಈ ಚಿತ್ರದಲ್ಲಿದ್ದು, ಮೊದಲ ಹಾಡಾಗಿ ‘ಕೋಣಾಣೆ’ ಬಿಡುಗಡೆಯಾಗಿದೆ. ಚಿತ್ರೀಕರಣಕ್ಕಾಗಿ ಸುತ್ತಾಡುತ್ತಿದ್ದೆವು. ಎಚ್.ಡಿ.ಕೋಟೆಯ ಹಿರೇನಂದಿ ಗ್ರಾಮಕ್ಕೆ ಹೋಗಿದ್ದಾಗ ಅಲ್ಲಿ ಚಮ್ಮಮ್ಮ ಹಾಗೂ ಲಕ್ಷ್ಮಮ್ಮ ಅವರು ಹೊಲದಲ್ಲಿ ಕೆಲಸ ಮಾಡುತ್ತಾ ಹಾಡುತ್ತಿದ್ದುದ್ದನ್ನು ನೋಡಿದೆ. ಇವರಿಂದ ನಮ್ಮ ಚಿತ್ರದ ಹಾಡೊಂದನ್ನು ಹಾಡಿಸಬೇಕು ಎಂದು ನಿರ್ಧರಿಸಿದೆ. ಅಂದುಕೊಂಡಂತೆ ಅವರಿಂದಲೇ ಈ ಹಾಡು ಹಾಡಿಸಿದ್ದೇನೆ’ ಎಂದರು ನವೀನ್ ಸಜ್ಜು.</p>.<p>ಅನಿವಾಸಿ ಭಾರತೀಯರಾದ ಬೆನ್ ಚಿಕ್ಕಸ್ವಾಮಿ ಅರ್ಪಿಸುವ, ಕೀರ್ತಿಸ್ವಾಮಿ ನಿರ್ಮಿಸಿರುವ ಈ ಚಿತ್ರವನ್ನು ಧನುರ್ಧಾರಿ ಪವನ್ ನಿರ್ದೇಶಿಸಿದ್ದಾರೆ. ಇದು ಇವರು ನಿರ್ದೇಶಿಸಿರುವ ಮೊದಲ ಸಿನಿಮಾ. ರಿಷಿಕೇಶ್ ಛಾಯಾಚಿತ್ರಗ್ರಹಣ ಸಿನಿಮಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲಯಾಳದ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದಲ್ಲಿ ‘ಕಲಕಾತ..’ ಎಂಬ ಹಾಡೊಂದನ್ನು ಹಳ್ಳಿಯೊಂದರ ವೃದ್ಧೆ ನಂಜಿಯಮ್ಮ ಹಾಡಿದ್ದರು. ಇದು ಸಾಕಷ್ಟು ಜನಪ್ರಿಯವಾಗಿತ್ತು. ಇದೀಗ ಕನ್ನಡದಲ್ಲೂ ಇಂತಹ ಪ್ರಯತ್ನವೊಂದು ನಡೆದಿದೆ. </p>.<p>ಗಾಯಕನಾಗಿ ಗುರುತಿಸಿಕೊಂಡಿರುವ ನವೀನ್ ಸಜ್ಜು ನಾಯಕನಾಗಿ ನಟಿಸಿರುವ ಮೊದಲ ಚಿತ್ರ ‘ಲೋ ನವೀನ’ ರಿಲೀಸ್ಗೆ ಸಜ್ಜಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ‘ಕೋಣಾಣೆ’ ಎಂಬ ಹಾಡು ಬಿಡುಗಡೆಯಾಗಿದೆ. ಅಪ್ಪಟ ಜನಪದ ಶೈಲಿಯ ಈ ಹಾಡನ್ನು ಮೈಸೂರಿನ ಎಚ್.ಡಿ.ಕೋಟೆಯ ಚಮ್ಮಮ್ಮ ಹಾಗೂ ಲಕ್ಷ್ಮಮ್ಮ ಎಂಬುವವರು ಹಾಡಿದ್ದಾರೆ. ನವೀನ್ ಸಜ್ಜು ಕೂಡಾ ಗಾಯನಕ್ಕೆ ಜೊತೆಯಾಗಿದ್ದಾರೆ.</p>.<p>‘ಮೂಲತಃ ಮಳವಳ್ಳಿಯವನಾದ ನಾನು, ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದೆ. ನಾನು, ಸುನೀಲ್ ಮೈಸೂರು ಹಾಗೂ ಅನೇಕ ಸ್ನೇಹಿತರು ಸೇರಿ ಮನರಂಜನೆಯೇ ಪ್ರಧಾನವಾಗಿರುವ ಈ ಚಿತ್ರದ ಕಥೆ ಬರೆದಿದ್ದೇವೆ. ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ನಾನೇ ಸಂಗೀತ ಸಂಯೋಜಿಸಿರುವ ಐದು ಹಾಡುಗಳು ಈ ಚಿತ್ರದಲ್ಲಿದ್ದು, ಮೊದಲ ಹಾಡಾಗಿ ‘ಕೋಣಾಣೆ’ ಬಿಡುಗಡೆಯಾಗಿದೆ. ಚಿತ್ರೀಕರಣಕ್ಕಾಗಿ ಸುತ್ತಾಡುತ್ತಿದ್ದೆವು. ಎಚ್.ಡಿ.ಕೋಟೆಯ ಹಿರೇನಂದಿ ಗ್ರಾಮಕ್ಕೆ ಹೋಗಿದ್ದಾಗ ಅಲ್ಲಿ ಚಮ್ಮಮ್ಮ ಹಾಗೂ ಲಕ್ಷ್ಮಮ್ಮ ಅವರು ಹೊಲದಲ್ಲಿ ಕೆಲಸ ಮಾಡುತ್ತಾ ಹಾಡುತ್ತಿದ್ದುದ್ದನ್ನು ನೋಡಿದೆ. ಇವರಿಂದ ನಮ್ಮ ಚಿತ್ರದ ಹಾಡೊಂದನ್ನು ಹಾಡಿಸಬೇಕು ಎಂದು ನಿರ್ಧರಿಸಿದೆ. ಅಂದುಕೊಂಡಂತೆ ಅವರಿಂದಲೇ ಈ ಹಾಡು ಹಾಡಿಸಿದ್ದೇನೆ’ ಎಂದರು ನವೀನ್ ಸಜ್ಜು.</p>.<p>ಅನಿವಾಸಿ ಭಾರತೀಯರಾದ ಬೆನ್ ಚಿಕ್ಕಸ್ವಾಮಿ ಅರ್ಪಿಸುವ, ಕೀರ್ತಿಸ್ವಾಮಿ ನಿರ್ಮಿಸಿರುವ ಈ ಚಿತ್ರವನ್ನು ಧನುರ್ಧಾರಿ ಪವನ್ ನಿರ್ದೇಶಿಸಿದ್ದಾರೆ. ಇದು ಇವರು ನಿರ್ದೇಶಿಸಿರುವ ಮೊದಲ ಸಿನಿಮಾ. ರಿಷಿಕೇಶ್ ಛಾಯಾಚಿತ್ರಗ್ರಹಣ ಸಿನಿಮಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>