ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗ್ರಾಮಾಯಣ’ ಚಿತ್ರತಂಡ ಸೇರಿಕೊಂಡ ಲೂಸ್‌ ಮಾದ ಯೋಗಿ

Published 19 ಅಕ್ಟೋಬರ್ 2023, 23:30 IST
Last Updated 19 ಅಕ್ಟೋಬರ್ 2023, 23:30 IST
ಅಕ್ಷರ ಗಾತ್ರ

ವಿನಯ್‌ ರಾಜ್‌ಕುಮಾರ್‌–ಮೇಘಾ ಶೆಟ್ಟಿ ಅಭಿನಯದ ‘ಗ್ರಾಮಾಯಣ’ದ ಚಿತ್ರೀಕರಣ ಭರದಿಂದ ಸಾಗಿದ್ದು, ಲೂಸ್‌ ಮಾದ ಯೋಗಿ ಚಿತ್ರತಂಡ ಸೇರಿಕೊಂಡಿದ್ದಾರೆ. ದೇವನೂರು ಚಂದ್ರು ಆ್ಯಕ್ಷನ್‌ ಕಟ್‌ ಹೇಳಿದ್ದ ಈ ಸಿನಿಮಾಕ್ಕೆ ನಿರ್ಮಾಪಕ ಕೆ.ಪಿ. ಶ್ರೀಕಾಂತ್‌, ಲಹರಿ ಫಿಲ್ಮ್ಸ್ ಮನೋಹರ್‌ ನಾಯ್ಡು ಜೊತೆಗೂಡಿ ಬಂಡವಾಳ ಹೂಡಿದ್ದಾರೆ.

‘ಯೋಗಿ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಕಡೂರು ಬಳಿಯ ದೇವನೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಶೇ. 25ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಮೊದಲ ಹಂತದಲ್ಲಿ ಗ್ರಾಮೀಣ ಪರಿಸರದ ದೃಶ್ಯಗಳನ್ನು ಸೆರೆಹಿಡಿದಿದ್ದೇವೆ. ಮುಂದಿನ ದಿನಗಳಲ್ಲಿ ಕೋಲಾರ, ಕನಕಪುರ, ಗಾಜನೂರಿನಲ್ಲಿ ಚಿತ್ರೀಕರಿಸುವ ಯೋಜನೆಯಿದೆ. ಈ ವರ್ಷದ ಅಂತ್ಯದೊಳಗೆ ಚಿತ್ರ ಪೂರ್ತಿಗೊಳ್ಳಲಿದೆ’ ಎಂದು ನಿರ್ಮಾಪಕ ಕೆ.ಪಿ.ಶ್ರೀಕಾಂತ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ನಟ, ನಿರ್ದೇಶಕ ಬಿ.ಎಂ.ಗಿರಿರಾಜ್‌, ಗೋಪಾಲಕೃಷ್ಣ ದೇಶಪಾಂಡೆ, ಅಚ್ಯುತ್‌ ಕುಮಾರ್, ಅಪರ್ಣಾ ಮೊದಲಾದವರು ತಾರಾಗಣದಲ್ಲಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಸಂಗೀತ, ಯಶಸ್ವಿನಿ, ವಿಶ್ವಜಿತ್‌ ರಾವ್‌ ಛಾಯಾಗ್ರಹಣ, ದೀಪು ಅವರ ಸಂಕಲನ ಚಿತ್ರಕ್ಕಿದೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT