ರವಿಶಂಕರ್, ಸಾಧುಕೋಕಿಲ ಜತೆಗೆ ತೆಲುಗು, ಹಿಂದಿ, ತಮಿಳು ಮತ್ತು ಮಲೆಯಾಳಂ ಚಿತ್ರರಂಗದ ಒಬ್ಬೊಬ್ಬ ಕಲಾವಿದರು ನಟಿಸುತ್ತಿದ್ದಾರೆ. ಸಂಗೀತ ಸಂಯೋಜಕ ಕಾರ್ತಿಕ್ ವೆಂಕಟೇಶ್ ಈಗ ಆರೋನ್ ಕಾರ್ತಿಕ್ ಎಂದು ನಾಮಕರಣ ಮಾಡಿಕೊಂಡಿದ್ದಾರೆ. ನಾಲ್ಕು ಹಾಡುಗಳಿಗೆ ರಾಗ ಹೊಸೆಯುತ್ತಿದ್ದಾರೆ. ಛಾಯಾಗ್ರಹಣ ಆಶು ಮೋಹನ್ ಕುಮಾರ್, ಸಂಕಲನ ನಾಗರಾಜ ಜಿ.ಹಾರಸೂರ್, ಸಂಭಾಷಣೆ ಚಂದ್ರು, ಸಾಹಸ ಥ್ರಿಲ್ಲರ್ಮಂಜು, ನೃತ್ಯ ಕರಿಯಾನಂದ ಅವರದ್ದು. ಚಿತ್ರದುರ್ಗ, ಚಿಕ್ಕಮಗಳೂರು, ಮಡಿಕೇರಿ, ಗೋವಾ ಮತ್ತು ಮಹಾರಾಷ್ಟ್ರ ಕಡೆಗಳಲ್ಲಿ ಚಿತ್ರೀಕರಣ ನಡೆಸಲು ಯೋಜನೆ ರೂಪಿಸಲಾಗಿದೆ.