<p>‘ಕೆಮಿಸ್ಟ್ರಿ ಆಫ್ ಕರಿಯಪ್ಪ’ದ ನಿರ್ದೇಶಕ ಕುಮಾರ್ ನಿರ್ದೇಶನದ ‘ಲವ್ ಯು ಮುದ್ದು’ ಇಂದು(ನ.7) ತೆರೆಕಂಡಿದೆ. </p><p>ಈ ಸಿನಿಮಾದಲ್ಲಿ ಸಿದ್ದು ಮೂಲಿಮನಿ ನಾಯಕನಾಗಿ ಹಾಗೂ ರೇಷ್ಮಾ ನಾಯಕಿಯಾಗಿ ಬಣ್ಣಹಚ್ಚಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ ಯುವ ದಂಪತಿಗಳಾದ ಆಕಾಶ್ ನಾರಾಯಣ್ಕರ್ ಮತ್ತು ಅಂಜಲಿ ಭಾಯ್ ಶಿಂಧೆ ಜೀವನದ ಕಥೆಯೇ ಈ ಸಿನಿಮಾದ ಎಳೆ.</p><p>ಪ್ರೀತಿಯೇ ಸರ್ವಸ್ವ, ಪ್ರೀತಿಯೇ ಸಕಲ ಎನ್ನುವುದನ್ನು ಸಾಬೀತು ಮಾಡಿದ ಜೋಡಿಯ ಜೀವನದಲ್ಲಾದ ಏಳುಬೀಳಿನ ಕಥೆ ಇದಾಗಿದೆ. ನವದಂಪತಿಗಳು ದೇವರ ದರ್ಶನ ಪಡೆಯಲು ಹೋದಾಗ ಊಹಿಸಲಾಗದ ಘಟನೆ ನಡೆಯಿತು. ಅದು ಏನು? ಅವರಿಬ್ಬರ ಬಾಳಲ್ಲಿ ನಡೆದ ಘೋರ ದುರಂತವೇನು ಎನ್ನುವುದಕ್ಕೆ ಸಿನಿಮಾ ರೂಪ ನೀಡಿದ್ದಾರೆ ಕುಮಾರ್.</p><p>ಇದರು ಅವರ ಐದನೇ ಸಿನಿಮಾ. ರಾಜೇಶ್ ನಟರಂಗ, ತಬಲಾ ನಾಣಿ, ಗಿರೀಶ್ ಶಿವಣ್ಣ, ಶ್ರೀವತ್ಸ ಮತ್ತು ಸ್ವಾತಿ ತಾರಾಬಳಗದಲ್ಲಿದ್ದಾರೆ. ಕಿಶನ್ ಎಂಟರ್ಟೇನ್ಮೆಂಟ್ ಬ್ಯಾನರ್ನಡಿ ಕಿಶನ್ ಟಿ.ಎನ್. ಚಿತ್ರ ನಿರ್ಮಾಣ ಮಾಡಿದ್ದಾರೆ. ಕೃಷ್ಣ ದೀಪಕ್ ಛಾಯಾಚಿತ್ರಗ್ರಹಣ, ಅನಿರುದ್ಧ ಶಾಸ್ತ್ರೀ ಸಂಗೀತ ನಿರ್ದೇಶನ ಹಾಗೂ ಸಿ.ಎಸ್.ದೀಪು ಸಂಕಲನ ಚಿತ್ರಕ್ಕಿದೆ. ಜಗದೀಶ್ ಫಿಲ್ಮಂ ಚಿತ್ರವನ್ನು ರಾಜ್ಯದಾದ್ಯಂತ ವಿತರಣೆ ಮಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಕೆಮಿಸ್ಟ್ರಿ ಆಫ್ ಕರಿಯಪ್ಪ’ದ ನಿರ್ದೇಶಕ ಕುಮಾರ್ ನಿರ್ದೇಶನದ ‘ಲವ್ ಯು ಮುದ್ದು’ ಇಂದು(ನ.7) ತೆರೆಕಂಡಿದೆ. </p><p>ಈ ಸಿನಿಮಾದಲ್ಲಿ ಸಿದ್ದು ಮೂಲಿಮನಿ ನಾಯಕನಾಗಿ ಹಾಗೂ ರೇಷ್ಮಾ ನಾಯಕಿಯಾಗಿ ಬಣ್ಣಹಚ್ಚಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ ಯುವ ದಂಪತಿಗಳಾದ ಆಕಾಶ್ ನಾರಾಯಣ್ಕರ್ ಮತ್ತು ಅಂಜಲಿ ಭಾಯ್ ಶಿಂಧೆ ಜೀವನದ ಕಥೆಯೇ ಈ ಸಿನಿಮಾದ ಎಳೆ.</p><p>ಪ್ರೀತಿಯೇ ಸರ್ವಸ್ವ, ಪ್ರೀತಿಯೇ ಸಕಲ ಎನ್ನುವುದನ್ನು ಸಾಬೀತು ಮಾಡಿದ ಜೋಡಿಯ ಜೀವನದಲ್ಲಾದ ಏಳುಬೀಳಿನ ಕಥೆ ಇದಾಗಿದೆ. ನವದಂಪತಿಗಳು ದೇವರ ದರ್ಶನ ಪಡೆಯಲು ಹೋದಾಗ ಊಹಿಸಲಾಗದ ಘಟನೆ ನಡೆಯಿತು. ಅದು ಏನು? ಅವರಿಬ್ಬರ ಬಾಳಲ್ಲಿ ನಡೆದ ಘೋರ ದುರಂತವೇನು ಎನ್ನುವುದಕ್ಕೆ ಸಿನಿಮಾ ರೂಪ ನೀಡಿದ್ದಾರೆ ಕುಮಾರ್.</p><p>ಇದರು ಅವರ ಐದನೇ ಸಿನಿಮಾ. ರಾಜೇಶ್ ನಟರಂಗ, ತಬಲಾ ನಾಣಿ, ಗಿರೀಶ್ ಶಿವಣ್ಣ, ಶ್ರೀವತ್ಸ ಮತ್ತು ಸ್ವಾತಿ ತಾರಾಬಳಗದಲ್ಲಿದ್ದಾರೆ. ಕಿಶನ್ ಎಂಟರ್ಟೇನ್ಮೆಂಟ್ ಬ್ಯಾನರ್ನಡಿ ಕಿಶನ್ ಟಿ.ಎನ್. ಚಿತ್ರ ನಿರ್ಮಾಣ ಮಾಡಿದ್ದಾರೆ. ಕೃಷ್ಣ ದೀಪಕ್ ಛಾಯಾಚಿತ್ರಗ್ರಹಣ, ಅನಿರುದ್ಧ ಶಾಸ್ತ್ರೀ ಸಂಗೀತ ನಿರ್ದೇಶನ ಹಾಗೂ ಸಿ.ಎಸ್.ದೀಪು ಸಂಕಲನ ಚಿತ್ರಕ್ಕಿದೆ. ಜಗದೀಶ್ ಫಿಲ್ಮಂ ಚಿತ್ರವನ್ನು ರಾಜ್ಯದಾದ್ಯಂತ ವಿತರಣೆ ಮಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>