ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಲವ್‌ ಯೂ ರಚ್ಚು’ ಸಿನಿಮಾ ದುರಂತ: ನಟ ಅಜಯ್ ರಾವ್‌ ವಿಚಾರಣೆ

Last Updated 26 ಆಗಸ್ಟ್ 2021, 15:55 IST
ಅಕ್ಷರ ಗಾತ್ರ

ರಾಮನಗರ: ‘ಲವ್‌ ಯೂ ರಚ್ಚು’ ಸಿನಿಮಾ ದುರಂತಕ್ಕೆ ಸಂಬಂಧಿಸಿ ಚಿತ್ರದ ನಾಯಕ ಅಜಯ್‌ ರಾವ್‌ ಗುರುವಾರ ಬಿಡದಿ ಪೊಲೀಸ್‌ ಠಾಣೆಯಲ್ಲಿ ವಿಚಾರಣೆಗೆ ಹಾಜರಾದರು.

ಈ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದ ಅಜಯ್‌ ‘ನಾನು ಯಾರಿಗೂ ಹೆದರಿಕೊಂಡು ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ. ಅದರ ಅಗತ್ಯವೂ ಇಲ್ಲ. ಆದರೆ ನನ್ನನ್ನೇ ನಂಬಿಕೊಂಡು ಹಲವು ಚಲನಚಿತ್ರ ನಿರ್ಮಾಪಕರು ಕೋಟ್ಯಾಂತರ ರೂಪಾಯಿ ಬಂಡವಾಳ ಹೂಡಿದ್ದಾರೆ. ಕೃಷ್ಣ ಟಾಕೀಸ್‌ ಮತ್ತೆ ಬಿಡುಗಡೆ ಆಗುತ್ತಿದ್ದು, ಶೋಕಿವಾಲಾ ಸಿನಿಮಾ ಬಿಡುಗಡೆಗೆ ಸಿದ್ಧತೆ ನಡೆದಿದೆ. ಲವ್‌ ಯೂ ರಚ್ಚು ಸಿನಿಮಾ ಬಳಿಕ ಇನ್ನೊಂದು ಚಿತ್ರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ಅವರಿಗೆಲ್ಲ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೇನೆ’ ಎಂದು ತಿಳಿಸಿದರು.

ಗಾಯಾಳು ರಂಜಿತ್‌ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅಜಯ್ ‘ಕೆಲವರು ಉದ್ದೇಶಪೂರ್ವಕವಾಗಿ ರಂಜಿತ್‌ಗೆ ತಪ್ಪು ಮಾಹಿತಿ ನೀಡಿದ್ದಾರೆ. ನಾನು ಸ್ಥಳದಲ್ಲಿ ಇರಲಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಸೆಟ್‌ನಲ್ಲಿ ಹುಡುಗ ಬಿದ್ದ ನಂತರ ನಿಮಿಷದ ಬಳಿಕ ನಾನು ಸ್ಥಳಕ್ಕೆ ತೆರಳಿ ವೀಕ್ಷಿಸಿದೆ. ಅಷ್ಟರಲ್ಲಿ ಆಗಲೇ ಹಲವರು ಸಹಾಯಕ್ಕೆ ಧಾವಿಸಿದ್ದರು. ಮಾನವೀಯತೆ ದೃಷ್ಟಿಯಿಂದ ಇಡೀ ಚಿತ್ರತಂಡ ಸ್ಪಂದಿಸಿದೆ. ಸಾಕ್ಷ್ಯ ನಾಶಕ್ಕೆ ಪ್ರಯತ್ನ ಮಾಡಿಲ್ಲ.’ ಎಂದರು.

‘ಘಟನೆ ನಂತರ ನಿರ್ಮಾಪಕರು ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ. ನೊಂದ ಕುಟುಂಬಗಳಿಗೆ ಖಂಡಿತವಾಗಿಯೂ ನಾವೆಲ್ಲ ಕೈಲಾದ ಸಹಾಯ ಮಾಡುತ್ತೇವೆ. ಪೊಲೀಸರು ಮುಂದೆಯೂ ವಿಚಾರಣೆಗೆ ಕರೆದರೆ ಬರುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT