ಈ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದ ಅಜಯ್ ‘ನಾನು ಯಾರಿಗೂ ಹೆದರಿಕೊಂಡು ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ. ಅದರ ಅಗತ್ಯವೂ ಇಲ್ಲ. ಆದರೆ ನನ್ನನ್ನೇ ನಂಬಿಕೊಂಡು ಹಲವು ಚಲನಚಿತ್ರ ನಿರ್ಮಾಪಕರು ಕೋಟ್ಯಾಂತರ ರೂಪಾಯಿ ಬಂಡವಾಳ ಹೂಡಿದ್ದಾರೆ. ಕೃಷ್ಣ ಟಾಕೀಸ್ ಮತ್ತೆ ಬಿಡುಗಡೆ ಆಗುತ್ತಿದ್ದು, ಶೋಕಿವಾಲಾ ಸಿನಿಮಾ ಬಿಡುಗಡೆಗೆ ಸಿದ್ಧತೆ ನಡೆದಿದೆ. ಲವ್ ಯೂ ರಚ್ಚು ಸಿನಿಮಾ ಬಳಿಕ ಇನ್ನೊಂದು ಚಿತ್ರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ಅವರಿಗೆಲ್ಲ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದೇನೆ’ ಎಂದು ತಿಳಿಸಿದರು.