<p><strong>ಬೆಂಗಳೂರು</strong>: ‘ಚಿತ್ರರಂಗ, ಕಿರುತೆರೆಯಲ್ಲಿ ನಟ ಮಡೆನೂರು ಮನುಗೆ ಯಾರೂ ಸಹಕಾರ ನೀಡಬಾರದು ಎಂಬ ಒಕ್ಕೊರಲ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು ಹೇಳಿದರು. </p><p>ನಟ ಮಡೆನೂರು ಮನು ಅವರದ್ದು ಎನ್ನಲಾದ ಆಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ನಟರಾದ ಶಿವರಾಜ್ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾ ಅವರ ಬಗ್ಗೆ ಕೀಳು ಮಾತುಗಳಿವೆ. ಈ ಕುರಿತು ಮಂಗಳವಾರ (ಮೇ 27) ಅಂಗಸಂಸ್ಥೆಗಳ ಅಧ್ಯಕ್ಷರ ಜೊತೆಗೆ ನರಸಿಂಹಲು ಸಭೆ ನಡೆಸಿದರು. </p><p>‘ಮಂಡಳಿಯು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಈ ಬಗ್ಗೆ ದೂರು ನೀಡಲಿದೆ. ಮಡೆನೂರು ಮನು ಯಾವುದೇ ರೀತಿಯ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ. ನಾಯಕ ನಟರ ಬಗ್ಗೆ ಮಾತನಾಡಿರುವುದು ಸರಿಯಲ್ಲ. ಆಡಿಯೊದಲ್ಲಿರುವ ಧ್ವನಿ ಅವರದ್ದೇ ಎನ್ನುವುದನ್ನು ನಾವು ಪರಿಶೀಲಿಸಿಲ್ಲ. ಈ ಕುರಿತು ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆಡಿಯೊ ಕೇಳಿಕೊಂಡು ಈ ನಿರ್ಧಾರ ಮಾಡಿದ್ದೇವೆ. ನಾವು ಕಾನೂನು ಪ್ರಕಾರವಾಗಿ ಮುಂದಿನ ಹೆಜ್ಜೆ ಇಡಲಿದ್ದೇವೆ. ಕಲಾವಿದರ ಸಂಘವನ್ನೂ ಈ ಸಭೆಗೆ ಆಹ್ವಾನಿಸಿದ್ದೆವು. ಮಂಡಳಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಅವರು ಹೇಳಿದ್ದಾರೆ’ ಎಂದು ನರಸಿಂಹಲು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಚಿತ್ರರಂಗ, ಕಿರುತೆರೆಯಲ್ಲಿ ನಟ ಮಡೆನೂರು ಮನುಗೆ ಯಾರೂ ಸಹಕಾರ ನೀಡಬಾರದು ಎಂಬ ಒಕ್ಕೊರಲ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ನರಸಿಂಹಲು ಹೇಳಿದರು. </p><p>ನಟ ಮಡೆನೂರು ಮನು ಅವರದ್ದು ಎನ್ನಲಾದ ಆಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ನಟರಾದ ಶಿವರಾಜ್ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾ ಅವರ ಬಗ್ಗೆ ಕೀಳು ಮಾತುಗಳಿವೆ. ಈ ಕುರಿತು ಮಂಗಳವಾರ (ಮೇ 27) ಅಂಗಸಂಸ್ಥೆಗಳ ಅಧ್ಯಕ್ಷರ ಜೊತೆಗೆ ನರಸಿಂಹಲು ಸಭೆ ನಡೆಸಿದರು. </p><p>‘ಮಂಡಳಿಯು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಈ ಬಗ್ಗೆ ದೂರು ನೀಡಲಿದೆ. ಮಡೆನೂರು ಮನು ಯಾವುದೇ ರೀತಿಯ ಚಟುವಟಿಕೆಗಳಲ್ಲಿ ಭಾಗವಹಿಸುವಂತಿಲ್ಲ. ನಾಯಕ ನಟರ ಬಗ್ಗೆ ಮಾತನಾಡಿರುವುದು ಸರಿಯಲ್ಲ. ಆಡಿಯೊದಲ್ಲಿರುವ ಧ್ವನಿ ಅವರದ್ದೇ ಎನ್ನುವುದನ್ನು ನಾವು ಪರಿಶೀಲಿಸಿಲ್ಲ. ಈ ಕುರಿತು ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆಡಿಯೊ ಕೇಳಿಕೊಂಡು ಈ ನಿರ್ಧಾರ ಮಾಡಿದ್ದೇವೆ. ನಾವು ಕಾನೂನು ಪ್ರಕಾರವಾಗಿ ಮುಂದಿನ ಹೆಜ್ಜೆ ಇಡಲಿದ್ದೇವೆ. ಕಲಾವಿದರ ಸಂಘವನ್ನೂ ಈ ಸಭೆಗೆ ಆಹ್ವಾನಿಸಿದ್ದೆವು. ಮಂಡಳಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಅವರು ಹೇಳಿದ್ದಾರೆ’ ಎಂದು ನರಸಿಂಹಲು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>