ತೆಲುಗಿನ ಖ್ಯಾತ ನಟ ಜಗಪತಿ ಬಾಬು ಖಳನಾಯಕನಾಗಿ, ಹಾಸ್ಯ ನಟರಾದ ರಂಗಾಯಣ ರಘು, ಚಿಕ್ಕಣ್ಣ, ಶಿವರಾಜ್ ಕೆ.ಆರ್.ಪೇಟೆ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದಾರೆ. ಛಾಯಾಗ್ರಹಣ ನವೀನ್ ಕುಮಾರ್, ಸಂಗೀತ ನಿರ್ದೇಶನ ರವಿ ಬಸ್ರೂರು. ಕಲಾ ನಿರ್ದೇಶನ ಮೋಹನ್ ಬಿ.ಕೆರೆ ಅವರದು. ಉಮಾಪತಿ ಶ್ರೀನಿವಾಸಗೌಡ ಚಿತ್ರದ ನಿರ್ಮಾಪಕರು.