ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾನ್ಸರ್ ಪೀಡಿತರಿಗೆ ನೆರವಾಗಲು ತಲೆಕೂದಲು ದಾನ ಮಾಡಿದ ಮಾಧುರಿ ದೀಕ್ಷಿತ್ ಪುತ್ರ

Last Updated 8 ನವೆಂಬರ್ 2021, 7:18 IST
ಅಕ್ಷರ ಗಾತ್ರ

ಬೆಂಗಳೂರು: ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ಉದ್ದೇಶದಿಂದ ನಟಿ ಮಾಧುರಿ ದೀಕ್ಷಿತ್ ಅವರ ಪುತ್ರ ರಾಯನ್ ತಮ್ಮ ತಲೆ ಕೂದಲು ದಾನ ಮಾಡಿದ್ದಾರೆ.

ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಕೀಮೋಥೆರಪಿಗೆ ಒಳಗಾಗಿ ತಲೆ ಕೂದಲು ಉದುರುವುದು ಸಾಮಾನ್ಯ.

ಅವರಿಗೆ ವಿಗ್ ತಯಾರಿಸಲು ತಲೆ ಕೂದಲಿನ ಅಗತ್ಯವಿರುತ್ತದೆ. ಹೀಗಾಗಿ ಅದನ್ನು ಗಮನಿಸಿದ ರಾಯನ್, ಸುಮಾರು ಎರಡು ವರ್ಷಗಳ ಕಾಲ ತಲೆಕೂದಲು ಕತ್ತರಿಸದೆ ಹಾಗೆಯೇ ಉಳಿಸಿಕೊಂಡಿದ್ದರು. ನಂತರ ತಲೆಕೂದಲು ಕತ್ತರಿಸಿ, ಅದನ್ನು ಕ್ಯಾನ್ಸರ್ ಸೊಸೈಟಿಗೆ ನೀಡಿದ್ದಾರೆ.

ಪುತ್ರನ ಕುರಿತು ಮಾಧುರಿ ದೀಕ್ಷಿತ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಮಗನ ನಿರ್ಧಾರದ ಬಗ್ಗೆ ಅವರು ಹೆಮ್ಮೆ ವ್ಯಕ್ತಪಡಿಸಿದ್ದು, ಅಭಿಮಾನಿಗಳು ಕೂಡ ರಾಯನ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಲು ಪ್ರತಿವರ್ಷ ನವೆಂಬರ್ 7ರಂದು ‘ನ್ಯಾಷನಲ್ ಕ್ಯಾನ್ಸರ್ ಅವಾರ್‌ನೆಸ್ ಡೇ’ ಆಚರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ಮಾಧುರಿ ದೀಕ್ಷಿತ್, ಮಗನ ಕಾರ್ಯದ ಕುರಿತು ಪೋಸ್ಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT