<figcaption>""</figcaption>.<p><strong>ಹುಬ್ಬಳ್ಳಿ</strong>: ‘ಉತ್ತರ ಕರ್ನಾಟಕ ಭಾಗದ ಮಂದಿ ಸೇರಿ ನಿರ್ಮಿಸಿರುವ ‘ಮದುವೆ ಮಾಡ್ರೀ ಸರಿ ಹೋಗ್ತಾನೆ...’ ಸಿನಿಮಾ ಫೆಬ್ರುವರಿ ತಿಂಗಳಲ್ಲಿ ತೆರೆಗೆ ಬರಲಿದೆ’ ಎಂದು ಚಿತ್ರದ ನಿರ್ದೇಶಕ ಗೋಪಿ ಕೆರೂರ್ ಹೇಳಿದರು.</p>.<p>‘ಇದು ನನ್ನ ಎರಡನೇ ಚಿತ್ರ. ಉಡಾಳ ಹುಡುಗನೊಬ್ಬನ ಸುತ್ತ ಕಥೆ ಹೆಣೆಯಲಾಗಿದೆ. ಚಿತ್ರದಲ್ಲಿ 11 ಹಾಡುಗಳಿದ್ದು, ಅವಿನಾಶ್ ಬಾಸೂತ್ಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಉತ್ತರ ಕರ್ನಾಟಕದ ಚಿತ್ರವಾದರೂ, ಯಾವುದೇ ಕಮರ್ಷಿಯಲ್ ಚಿತ್ರಗಳಿಗೂ ಕಮ್ಮಿ ಇಲ್ಲದಂತೆ ನಿರ್ಮಿಸಲಾಗಿದೆ‘ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಮೊದಲ ಚಿತ್ರದ ಪುಳಕದಲ್ಲಿದ್ದ ನಟ ಶಿವಚಂದ್ರ ಕುಮಾರ್, ‘ತುಂಟ ಹುಡುಗನೊಬ್ಬ ಪ್ರೀತಿಯ ಬಲೆಯಲ್ಲಿ ಬಿದ್ದು, ಹೇಗೆ ಜವಾಬ್ದಾರಿಯುತ ಮನುಷ್ಯನಾಗುತ್ತಾನೆ. ಆ ಮೂಲಕ, ತನ್ನ ಊರಿನವರ ಮನಸ್ಸು ಗೆಲ್ಲುತ್ತಾನೆ ಎಂಬುದು ಚಿತ್ರದ ತಿರುಳು‘ ಎಂದು ತಮ್ಮ ಪಾತ್ರದ ಎಳೆಯನ್ನು ಬಿಚ್ಚಿಟ್ಟರು.</p>.<p>ನಟಿ ಆರಾಧ್ಯ, ‘ಮೊದಲ ಸಿನಿಮಾದಲ್ಲೇ ಗಂಭೀರವಾದ ಪಾತ್ರ ಸಿಕ್ಕಿರುವುದು ನನ್ನ ಅದೃಷ್ಟ. ನಟನೆಗೆ ಹೆಚ್ಚು ಒತ್ತು ಇರುವ ಈ ಪಾತ್ರ ಪ್ರೇಕ್ಷಕರ ನೆನಪಿನಲ್ಲಿ ಉಳಿಯಲಿದೆ’ ಎಂದರು.</p>.<p>ನಿರ್ಮಾಪಕ ಶಿವರಾಜ್ ಲಕ್ಷ್ಮಣರಾವ್ ದೇಸಾಯಿ, ‘ಉತ್ತರ ಕರ್ನಾಟಕದ ಸೊಗಡಿನ ಈ ಸಿನಿಮಾವನ್ನು ಸುಮಾರು 100 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುವುದು. ಚಿತ್ರದಲ್ಲಿ ಹಾಸ್ಯದಷ್ಟೇ ಗಂಭೀರತೆಯೂ ಇದ್ದು, ಕುಟುಂಬದವರೆಲ್ಲರೂ ಕುಳಿತು ವೀಕ್ಷಿಸಬಹುದಾದ ಸಿನಿಮಾ ಇದಾಗಿದೆ’ ಎಂದು ಹೇಳಿದರು.</p>.<div style="text-align:center"><figcaption><strong>ಶಿವಚಂದ್ರಕುಮಾರ್, ಆರಾಧ್ಯ</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಹುಬ್ಬಳ್ಳಿ</strong>: ‘ಉತ್ತರ ಕರ್ನಾಟಕ ಭಾಗದ ಮಂದಿ ಸೇರಿ ನಿರ್ಮಿಸಿರುವ ‘ಮದುವೆ ಮಾಡ್ರೀ ಸರಿ ಹೋಗ್ತಾನೆ...’ ಸಿನಿಮಾ ಫೆಬ್ರುವರಿ ತಿಂಗಳಲ್ಲಿ ತೆರೆಗೆ ಬರಲಿದೆ’ ಎಂದು ಚಿತ್ರದ ನಿರ್ದೇಶಕ ಗೋಪಿ ಕೆರೂರ್ ಹೇಳಿದರು.</p>.<p>‘ಇದು ನನ್ನ ಎರಡನೇ ಚಿತ್ರ. ಉಡಾಳ ಹುಡುಗನೊಬ್ಬನ ಸುತ್ತ ಕಥೆ ಹೆಣೆಯಲಾಗಿದೆ. ಚಿತ್ರದಲ್ಲಿ 11 ಹಾಡುಗಳಿದ್ದು, ಅವಿನಾಶ್ ಬಾಸೂತ್ಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಉತ್ತರ ಕರ್ನಾಟಕದ ಚಿತ್ರವಾದರೂ, ಯಾವುದೇ ಕಮರ್ಷಿಯಲ್ ಚಿತ್ರಗಳಿಗೂ ಕಮ್ಮಿ ಇಲ್ಲದಂತೆ ನಿರ್ಮಿಸಲಾಗಿದೆ‘ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಮೊದಲ ಚಿತ್ರದ ಪುಳಕದಲ್ಲಿದ್ದ ನಟ ಶಿವಚಂದ್ರ ಕುಮಾರ್, ‘ತುಂಟ ಹುಡುಗನೊಬ್ಬ ಪ್ರೀತಿಯ ಬಲೆಯಲ್ಲಿ ಬಿದ್ದು, ಹೇಗೆ ಜವಾಬ್ದಾರಿಯುತ ಮನುಷ್ಯನಾಗುತ್ತಾನೆ. ಆ ಮೂಲಕ, ತನ್ನ ಊರಿನವರ ಮನಸ್ಸು ಗೆಲ್ಲುತ್ತಾನೆ ಎಂಬುದು ಚಿತ್ರದ ತಿರುಳು‘ ಎಂದು ತಮ್ಮ ಪಾತ್ರದ ಎಳೆಯನ್ನು ಬಿಚ್ಚಿಟ್ಟರು.</p>.<p>ನಟಿ ಆರಾಧ್ಯ, ‘ಮೊದಲ ಸಿನಿಮಾದಲ್ಲೇ ಗಂಭೀರವಾದ ಪಾತ್ರ ಸಿಕ್ಕಿರುವುದು ನನ್ನ ಅದೃಷ್ಟ. ನಟನೆಗೆ ಹೆಚ್ಚು ಒತ್ತು ಇರುವ ಈ ಪಾತ್ರ ಪ್ರೇಕ್ಷಕರ ನೆನಪಿನಲ್ಲಿ ಉಳಿಯಲಿದೆ’ ಎಂದರು.</p>.<p>ನಿರ್ಮಾಪಕ ಶಿವರಾಜ್ ಲಕ್ಷ್ಮಣರಾವ್ ದೇಸಾಯಿ, ‘ಉತ್ತರ ಕರ್ನಾಟಕದ ಸೊಗಡಿನ ಈ ಸಿನಿಮಾವನ್ನು ಸುಮಾರು 100 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುವುದು. ಚಿತ್ರದಲ್ಲಿ ಹಾಸ್ಯದಷ್ಟೇ ಗಂಭೀರತೆಯೂ ಇದ್ದು, ಕುಟುಂಬದವರೆಲ್ಲರೂ ಕುಳಿತು ವೀಕ್ಷಿಸಬಹುದಾದ ಸಿನಿಮಾ ಇದಾಗಿದೆ’ ಎಂದು ಹೇಳಿದರು.</p>.<div style="text-align:center"><figcaption><strong>ಶಿವಚಂದ್ರಕುಮಾರ್, ಆರಾಧ್ಯ</strong></figcaption></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>