ಮಹೇಶ್ ಬಾಬು ನಟನೆಯ ‘ಸರಿಲೇರು ನೀಕೆವ್ವರು’ ಸಿನಿಮಾ ಕೂಡ ಸಂಕ್ರಾಂತಿಗೆ ಬಿಡುಗಡೆಯಾಗಲಿದೆ ಎಂದು ಘೋಷಣೆ ಮಾಡಲಾಗಿದೆ. ರಶ್ಮಿಕಾ ಮಂದಣ್ಣ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಅನಿಲ್ ರವಿಪುಡಿ ನಿರ್ದೇಶನದ ಚಿತ್ರ, ಬಿಡುಗಡೆಯ ದಿನಾಂಕವನ್ನು ಮೊದಲೇ ಪ್ರಕಟಿಸಿತ್ತು. ಆದ್ದರಿಂದ ಈ ಎರಡರಲ್ಲಿ ಯಾವ ಸಿನಿಮಾ ತನ್ನ ಬಿಡುಗಡೆಯ ದಿನಾಂಕ ಬದಲಿಸಿಕೊಳ್ಳಲಿದೆ ಎಂಬ ಕುತೂಹಲ ಈಗ ಟಾಲಿವುಡ್ನಲ್ಲಿ ಗರಿಗೆದರಿದೆ.