<p>ತೆಲುಗಿನ ‘ಪ್ರಿನ್ಸ್’ ಖ್ಯಾತಿಯ ನಟ ಮಹೇಶ್ ಬಾಬು ತಮ್ಮ ಹುಟ್ಟುಹಬ್ಬದಂದು ಸಸಿ ನೆಡುವ ಮೂಲಕ ಜನ್ಮದಿನ ಆಚರಣೆಗೆ ಇದಕ್ಕಿಂತ ಮಹತ್ವದ ಮಾರ್ಗ ಬೇರೊಂದಿಲ್ಲ ಎಂದು ಬಣ್ಣಿಸಿದ್ದಾರೆ.</p>.<p>ತಮ್ಮ ಮನೆಯ ಗಾರ್ಡನ್ನಲ್ಲಿ ಗಿಡ ನೆಟ್ಟಿರುವ ವಿಡಿಯೊ ಅನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಮಹೇಶ್ ಬಾಬು, ಗ್ರೀನ್ ಇಂಡಿಯಾ ಚಾಲೆಂಜ್ ಅಭಿಯಾನವನ್ನು ಬೆಂಬಲಿಸಿದ್ದಾರೆ. ಈ ಚಾಲೆಂಜ್ ಅನ್ನು ಜೂನಿಯರ್ ಎನ್ಟಿಆರ್, ವಿಜಯ್ ಮತ್ತು ಶ್ರುತಿ ಹಾಸನ್ ಅವರಿಗೆ ದಾಟಿಸಿದ್ದಾರೆ.</p>.<p>ಆಂಧ್ರದ ರಾಜ್ಯಸಭಾ ಸದಸ್ಯ ಜೋಗಿನಿಪಲ್ಲಿ ಸಂತೋಷ್ ಕುಮಾರ್ ಆರಂಭಿಸಿದ ‘ಗ್ರೀನ್ ಇಂಡಿಯಾ ಚಾಲೆಂಜ್’ ಯಶಸ್ಸಿನತ್ತ ಸಾಗಿದೆ. ಗ್ರೀನ್ ಇಂಡಿಯಾ ಚಾಲೆಂಜ್ ಭಾಗವಾಗಿ ಸೆಲೆಬ್ರಿಟಿಗಳು ಗಿಡಗಳನ್ನ ನಡುವ ಮೂಲಕ ಮತ್ತೆ ಮೂವರಿಗೆ ಗಿಡಗಳನ್ನ ನೆಡುವಂತೆ ಪ್ರೇರೇಪಿಸಿ ಅಭಿಯಾನದ ದೀವಟಿಗೆ ದಾಟಿಸುತ್ತಿದ್ದಾರೆ.</p>.<p>ಭಾನುವಾರವಷ್ಟೇ ನಟಮಹೇಶ್ ಬಾಬು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕೊರೊನಾ ಸೋಂಕು ಹರಡದಂತೆ ಒಬ್ಬರಿಗೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಂಡು, ಸುರಕ್ಷಿತವಾಗಿರಿ ಎಂದು ಹುಟ್ಟುಹಬ್ಬದ ವೇಳೆ ತಮ್ಮ ಅಭಿಮಾನಿಗಳಲ್ಲಿ ವಿನಂತಿ ಕೂಡ ಮಾಡಿಕೊಂಡಿದ್ದರು.</p>.<p>ಸವಾಲು ಪೂರೈಸಿದ ಆಶಿಕಾ ರಂಗನಾಥ್:</p>.<p>ಇನ್ನು‘ಗ್ರೀನ್ ಇಂಡಿಯಾ ಚಾಲೆಂಜ್’ಗೆ ಕೈಜೋಡಿಸಿದ ಮತ್ತೊಬ್ಬ ಕನ್ನಡದ ನಟಿ ಆಶಿಕಾ ರಂಗನಾಥ್ ಆ.5ರಂದು ತಮ್ಮ ಹುಟ್ಟುಹಬ್ಬದ ನಿಮಿತ್ತ ಮನೆಯ ಮುಂದೆ ಗಿಡ ನೆಟ್ಟು ಪರಿಸರ ಕಾಳಜಿ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.</p>.<p>‘ಗ್ರೀನ್ ಇಂಡಿಯಾ ಚಾಲೆಂಜ್’ಭಾಗವಾಗಿ ತೆಲುಗು ನಟಿ ಸಮಂತಾ ಅಕ್ಕಿನೇನಿ ಅವರು ಗಿಡ ನೆಡುವಸವಾಲನ್ನು ಕನ್ನಡದ ನಟಿ ರಶ್ಮಿಕಾ ಮಂದಣ್ಣಗೆ ದಾಟಿಸಿದ್ದರು. ಗಿಡವೊಂದನ್ನು ನೆಟ್ಟು ನೀರೆರೆದು, ಆ ಸವಾಲನ್ನು ನಟಿಯರಾದ ರಾಶಿ ಖನ್ನಾ, ಕಲ್ಯಾಣಿ ಪ್ರಿಯದರ್ಶನ್ ಮತ್ತು ಆಶಿಕಾ ರಂಗನಾಥ್ ಅವರಿಗೆ ದಾಟಿಸಿದ್ದರು. ರಶ್ಮಿಕಾ ಸವಾಲು ಪೂರೈಸಿರುವ ಆಶಿಕಾ ರಂಗನಾಥ್ ರಶ್ಮಿಕಾ ಮಂದಣ್ಣಗೆ ಧನ್ಯವಾದ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೆಲುಗಿನ ‘ಪ್ರಿನ್ಸ್’ ಖ್ಯಾತಿಯ ನಟ ಮಹೇಶ್ ಬಾಬು ತಮ್ಮ ಹುಟ್ಟುಹಬ್ಬದಂದು ಸಸಿ ನೆಡುವ ಮೂಲಕ ಜನ್ಮದಿನ ಆಚರಣೆಗೆ ಇದಕ್ಕಿಂತ ಮಹತ್ವದ ಮಾರ್ಗ ಬೇರೊಂದಿಲ್ಲ ಎಂದು ಬಣ್ಣಿಸಿದ್ದಾರೆ.</p>.<p>ತಮ್ಮ ಮನೆಯ ಗಾರ್ಡನ್ನಲ್ಲಿ ಗಿಡ ನೆಟ್ಟಿರುವ ವಿಡಿಯೊ ಅನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಮಹೇಶ್ ಬಾಬು, ಗ್ರೀನ್ ಇಂಡಿಯಾ ಚಾಲೆಂಜ್ ಅಭಿಯಾನವನ್ನು ಬೆಂಬಲಿಸಿದ್ದಾರೆ. ಈ ಚಾಲೆಂಜ್ ಅನ್ನು ಜೂನಿಯರ್ ಎನ್ಟಿಆರ್, ವಿಜಯ್ ಮತ್ತು ಶ್ರುತಿ ಹಾಸನ್ ಅವರಿಗೆ ದಾಟಿಸಿದ್ದಾರೆ.</p>.<p>ಆಂಧ್ರದ ರಾಜ್ಯಸಭಾ ಸದಸ್ಯ ಜೋಗಿನಿಪಲ್ಲಿ ಸಂತೋಷ್ ಕುಮಾರ್ ಆರಂಭಿಸಿದ ‘ಗ್ರೀನ್ ಇಂಡಿಯಾ ಚಾಲೆಂಜ್’ ಯಶಸ್ಸಿನತ್ತ ಸಾಗಿದೆ. ಗ್ರೀನ್ ಇಂಡಿಯಾ ಚಾಲೆಂಜ್ ಭಾಗವಾಗಿ ಸೆಲೆಬ್ರಿಟಿಗಳು ಗಿಡಗಳನ್ನ ನಡುವ ಮೂಲಕ ಮತ್ತೆ ಮೂವರಿಗೆ ಗಿಡಗಳನ್ನ ನೆಡುವಂತೆ ಪ್ರೇರೇಪಿಸಿ ಅಭಿಯಾನದ ದೀವಟಿಗೆ ದಾಟಿಸುತ್ತಿದ್ದಾರೆ.</p>.<p>ಭಾನುವಾರವಷ್ಟೇ ನಟಮಹೇಶ್ ಬಾಬು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಕೊರೊನಾ ಸೋಂಕು ಹರಡದಂತೆ ಒಬ್ಬರಿಗೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಂಡು, ಸುರಕ್ಷಿತವಾಗಿರಿ ಎಂದು ಹುಟ್ಟುಹಬ್ಬದ ವೇಳೆ ತಮ್ಮ ಅಭಿಮಾನಿಗಳಲ್ಲಿ ವಿನಂತಿ ಕೂಡ ಮಾಡಿಕೊಂಡಿದ್ದರು.</p>.<p>ಸವಾಲು ಪೂರೈಸಿದ ಆಶಿಕಾ ರಂಗನಾಥ್:</p>.<p>ಇನ್ನು‘ಗ್ರೀನ್ ಇಂಡಿಯಾ ಚಾಲೆಂಜ್’ಗೆ ಕೈಜೋಡಿಸಿದ ಮತ್ತೊಬ್ಬ ಕನ್ನಡದ ನಟಿ ಆಶಿಕಾ ರಂಗನಾಥ್ ಆ.5ರಂದು ತಮ್ಮ ಹುಟ್ಟುಹಬ್ಬದ ನಿಮಿತ್ತ ಮನೆಯ ಮುಂದೆ ಗಿಡ ನೆಟ್ಟು ಪರಿಸರ ಕಾಳಜಿ ಮತ್ತು ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.</p>.<p>‘ಗ್ರೀನ್ ಇಂಡಿಯಾ ಚಾಲೆಂಜ್’ಭಾಗವಾಗಿ ತೆಲುಗು ನಟಿ ಸಮಂತಾ ಅಕ್ಕಿನೇನಿ ಅವರು ಗಿಡ ನೆಡುವಸವಾಲನ್ನು ಕನ್ನಡದ ನಟಿ ರಶ್ಮಿಕಾ ಮಂದಣ್ಣಗೆ ದಾಟಿಸಿದ್ದರು. ಗಿಡವೊಂದನ್ನು ನೆಟ್ಟು ನೀರೆರೆದು, ಆ ಸವಾಲನ್ನು ನಟಿಯರಾದ ರಾಶಿ ಖನ್ನಾ, ಕಲ್ಯಾಣಿ ಪ್ರಿಯದರ್ಶನ್ ಮತ್ತು ಆಶಿಕಾ ರಂಗನಾಥ್ ಅವರಿಗೆ ದಾಟಿಸಿದ್ದರು. ರಶ್ಮಿಕಾ ಸವಾಲು ಪೂರೈಸಿರುವ ಆಶಿಕಾ ರಂಗನಾಥ್ ರಶ್ಮಿಕಾ ಮಂದಣ್ಣಗೆ ಧನ್ಯವಾದ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>