‘ಮಹರ್ಷಿ’ ಸಿನಿಮಾದ ಭರ್ಜರಿ ಯಶಸ್ಸಿನ ನಂತರ, ಪ್ರಿನ್ಸ್ ಮಹೇಶ್ ಬಾಬು ‘ಸರಿಲೇರು ನೀಕೆವ್ವರು’ ಚಿತ್ರದಲ್ಲಿ ಆರ್ಮಿ ಮೇಜರ್ ಪಾತ್ರ ನಿರ್ವಹಿಸಲಿದ್ದಾರೆ. ಈ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, 2020ರ ಸಂಕ್ರಾಂತಿಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ.
ತಮ್ಮ ಸಿನಿಜೀವನದಲ್ಲಿ ಇದೇ ಮೊದಲ ಬಾರಿಗೆ ಮಹೇಶ್ ಬಾಬು, ಆರ್ಮಿ ಮೇಜರ್ ಪಾತ್ರ ನಿರ್ವಹಿಸುತ್ತಿದ್ದಾರೆ.
ಇವರ ಈ ಹಿಂದಿನ ಚಿತ್ರ ‘ಮಹರ್ಷಿ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರಿ ಹಿಟ್ ಗಳಿಸಿತ್ತು. ನಂತರಅವರು ತಮ್ಮ ಕುಟುಂಬ ಸದಸ್ಯರ ಜೊತೆ ಯುರೋಪ್ಗೆ ಪ್ರವಾಸ ತೆರಳಿದ್ದರು. ಈಗ ಭಾರತಕ್ಕೆ ಹಿಂತಿರುಗಿದ ಕೂಡಲೇ ತಮ್ಮ ಮುಂದಿನ ಚಿತ್ರದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ಇತ್ತೀಚೆಗೆ‘ಸರಿಲೇರು ನೀಕೆವ್ವರು’ ಚಿತ್ರದ ಫೋಟೊವೊಂದನ್ನು ಮಹೇಶ್ ಬಾಬು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಅದರಲ್ಲಿ ಅವರ ಸಮವಸ್ತ್ರದ ಬ್ಯಾಡ್ಜ್ ಕಾಣಿಸುತ್ತಿದ್ದು, ಚಿತ್ರದಲ್ಲಿ ಅವರು ಮೇಜರ್ ಅಜಯ್ ಕೃಷ್ಣನಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಈ ಚಿತ್ರ ಬಹುಭಾಗ ಚಿತ್ರೀಕರಣ ಜಮ್ಮು ಹಾಗೂ ಕಾಶ್ಮೀರದಲ್ಲಿ ನಡೆಯುತ್ತಿದೆ. ಇದು ಮಹೇಶ್ ಬಾಬು ಅವರ 26ನೇ ಚಿತ್ರ.