<p>ಉದಯ್ ಪ್ರಸನ್ನ ನಿರ್ದೇಶನದ ‘ಮಹಿಷಾಸುರ’ ಚಿತ್ರಕ್ಕೆ ಕರ್ನಾಟಕ ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕೃತ ಮಂಡಳಿಯು ಯು/ಎ ಅರ್ಹತಾ ಪ್ರಮಾಣ ಪತ್ರ ನೀಡಿದೆ.</p>.<p>ಅರ್ಜುನ್, ಬಿಂದು ಹಾಗೂ ಮಂಜು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ತಮಿಳಿನ ‘ಅಸುರನ್’ ಚಿತ್ರದಂತೆ ಈ ಚಿತ್ರ ಕೂಡ ಸಿನಿಪ್ರಿಯರ ಹೃದಯ ಗೆಲ್ಲಲಿದೆ ಎನ್ನುವುದು ಚಿತ್ರತಂಡದ ನಿರೀಕ್ಷೆ.</p>.<p>ಇದೇ 15ರಂದು ಚಿತ್ರದ ಟ್ರೈಲರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಸದ್ಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯನ್ನೂ ಹಾಕಿಕೊಂಡಿದೆ. ಚಿತ್ರಮಂದಿರಗಳ ಬಾಗಿಲು ಪುನಾ ತೆರೆಯುವುದನ್ನು ಚಿತ್ರತಂಡ ಎದುರು ನೋಡುತ್ತಿದೆ.</p>.<p>‘ಮೆಳೇಕೋಟೆ ಟೂರಿಂಗ್ ಟಾಕೀಸ್’ ಹಾಗೂ ‘ಮೈತ್ರಿ ಪ್ರೊಡಕ್ಷನ್’ ಸಹಯೋಗದಲ್ಲಿ ಚಿತ್ರ ನಿರ್ಮಿಸಲಾಗಿದೆ.</p>.<p>‘ಮಹಿಷಾಸುರ’ ಚಿತ್ರ ಪೂರ್ಣಗೊಳಿಸಿದ ಖುಷಿಯಲ್ಲಿ ನಿರ್ದೇಶಕ ಉದಯ್ ಪ್ರಸನ್ನ, ಎರಡನೇ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲು ಅಣಿಯಾಗಿದ್ದಾರೆ. ಅವರ ನಿರ್ದೇಶನದ ಎರಡನೆ ಚಿತ್ರ ‘ಬೆಣ್ಣೆಗುಲ್ಕನ್’. ಈ ಚಿತ್ರವನ್ನು ಪ್ಯಾನ್ ಇಂಡಿಯಾ ಚಿತ್ರವಾಗಿ ಮಾಡುವ ದೊಡ್ಡ ಯೋಜನೆ ಅವರದು. ಚಿತ್ರದ ಕಥಾವಸ್ತು ಮತ್ತು ನಿರೂಪಣೆ ವಿಭಿನ್ನವಾಗಿರಲಿದ್ದು, ಈ ಚಿತ್ರ ಎಲ್ಲಾ ವರ್ಗದ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎನ್ನುವುದು ಅವರ ವಿಶ್ವಾಸದ ನುಡಿ.</p>.<p>‘ದೀಕ್ಷಾ ಸಮೂಹ’ ಹಾಗೂ ‘ಮೆಳೇಕೋಟೆ ಟೂರಿಂಗ್ ಟಾಕೀಸ್’ ಬ್ಯಾನರ್ನಲ್ಲಿ ಚಿತ್ರ ಮೂಡಿ ಬರಲಿದ್ದು, ಚಿತ್ರತಂಡವು ಕಲಾವಿದರ ಅನ್ವೇಷಣೆಯಲ್ಲಿ ತೊಡಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉದಯ್ ಪ್ರಸನ್ನ ನಿರ್ದೇಶನದ ‘ಮಹಿಷಾಸುರ’ ಚಿತ್ರಕ್ಕೆ ಕರ್ನಾಟಕ ಪ್ರಾದೇಶಿಕ ಚಲನಚಿತ್ರ ಪ್ರಮಾಣೀಕೃತ ಮಂಡಳಿಯು ಯು/ಎ ಅರ್ಹತಾ ಪ್ರಮಾಣ ಪತ್ರ ನೀಡಿದೆ.</p>.<p>ಅರ್ಜುನ್, ಬಿಂದು ಹಾಗೂ ಮಂಜು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ತಮಿಳಿನ ‘ಅಸುರನ್’ ಚಿತ್ರದಂತೆ ಈ ಚಿತ್ರ ಕೂಡ ಸಿನಿಪ್ರಿಯರ ಹೃದಯ ಗೆಲ್ಲಲಿದೆ ಎನ್ನುವುದು ಚಿತ್ರತಂಡದ ನಿರೀಕ್ಷೆ.</p>.<p>ಇದೇ 15ರಂದು ಚಿತ್ರದ ಟ್ರೈಲರ್ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಸದ್ಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯನ್ನೂ ಹಾಕಿಕೊಂಡಿದೆ. ಚಿತ್ರಮಂದಿರಗಳ ಬಾಗಿಲು ಪುನಾ ತೆರೆಯುವುದನ್ನು ಚಿತ್ರತಂಡ ಎದುರು ನೋಡುತ್ತಿದೆ.</p>.<p>‘ಮೆಳೇಕೋಟೆ ಟೂರಿಂಗ್ ಟಾಕೀಸ್’ ಹಾಗೂ ‘ಮೈತ್ರಿ ಪ್ರೊಡಕ್ಷನ್’ ಸಹಯೋಗದಲ್ಲಿ ಚಿತ್ರ ನಿರ್ಮಿಸಲಾಗಿದೆ.</p>.<p>‘ಮಹಿಷಾಸುರ’ ಚಿತ್ರ ಪೂರ್ಣಗೊಳಿಸಿದ ಖುಷಿಯಲ್ಲಿ ನಿರ್ದೇಶಕ ಉದಯ್ ಪ್ರಸನ್ನ, ಎರಡನೇ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲು ಅಣಿಯಾಗಿದ್ದಾರೆ. ಅವರ ನಿರ್ದೇಶನದ ಎರಡನೆ ಚಿತ್ರ ‘ಬೆಣ್ಣೆಗುಲ್ಕನ್’. ಈ ಚಿತ್ರವನ್ನು ಪ್ಯಾನ್ ಇಂಡಿಯಾ ಚಿತ್ರವಾಗಿ ಮಾಡುವ ದೊಡ್ಡ ಯೋಜನೆ ಅವರದು. ಚಿತ್ರದ ಕಥಾವಸ್ತು ಮತ್ತು ನಿರೂಪಣೆ ವಿಭಿನ್ನವಾಗಿರಲಿದ್ದು, ಈ ಚಿತ್ರ ಎಲ್ಲಾ ವರ್ಗದ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎನ್ನುವುದು ಅವರ ವಿಶ್ವಾಸದ ನುಡಿ.</p>.<p>‘ದೀಕ್ಷಾ ಸಮೂಹ’ ಹಾಗೂ ‘ಮೆಳೇಕೋಟೆ ಟೂರಿಂಗ್ ಟಾಕೀಸ್’ ಬ್ಯಾನರ್ನಲ್ಲಿ ಚಿತ್ರ ಮೂಡಿ ಬರಲಿದ್ದು, ಚಿತ್ರತಂಡವು ಕಲಾವಿದರ ಅನ್ವೇಷಣೆಯಲ್ಲಿ ತೊಡಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>