‘ನನಗೆ ಬದುಕು ಕೊಟ್ಟ ಚಿತ್ರರಂಗಕ್ಕೆ ಈಗ ನನ್ನ ಮಗಳೂ ಕಾಲಿಡುತ್ತಿದ್ದಾಳೆ. ರಾಕ್ಲೈನ್ ವೆಂಕಟೇಶ್ ಅವರು ನನ್ನ ಸಿನಿಮಾ ಮೂಲಕ ಚಿತ್ರ ನಿರ್ಮಾಣ ಪ್ರಾರಂಭಿಸಿದರು. ನನ್ನ ಮಗಳೂ ಅವರ ನಿರ್ಮಾಣದ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾಳೆ. ಅವಳು 14ನೇ ವಯಸ್ಸಿನಲ್ಲೇ ಚಿತ್ರರಂಗಕ್ಕೆ ಬರಬೇಕು, ಅಭಿನಯಿಸಬೇಕು ಎಂಬ ಆಸೆ ಹೊಂದಿದ್ದಳು. ಮುಂಬೈನಲ್ಲಿ ನಟನೆ, ಡ್ಯಾನ್ಸ್ ತರಬೇತಿ ಪಡೆದಿದ್ದಾಳೆ’ ಎಂದರು ಮಾಲಾಶ್ರೀ. ಚಿತ್ರಕ್ಕೆ ಸುಧಾಕರ್ ರಾಜ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನ ಮತ್ತು ಮಾಸ್ತಿ ಅವರ ಸಂಭಾಷಣೆ ಇದೆ.