<p><strong>ಕೊಚ್ಚಿ:</strong> ಖ್ಯಾತ ನಟಿಯೊಬ್ಬರಿಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡಿದ ಆರೋಪದ ಮೇಲೆ ಮಲಯಾಳಂ ಖ್ಯಾತ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಶಶಿಧರನ್ ವಿರುದ್ಧ ಹಿಂಬಾಲಿಸುವಿಕೆ, ಕ್ರಿಮಿನಲ್ ಬೆದರಿಕೆ ಮತ್ತು ಮಾನಹಾನಿಗೆ ಸಂಬಂಧಿಸಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ವಿವಿಧ ಸೆಕ್ಷನ್ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಏಳಮಕ್ಕರ ಪೊಲೀಸರು ಮಾಹಿತಿ ನೀಡಿದ್ದಾರೆ. </p><p>ನಟಿಯ ಹೆಸರಿನಲ್ಲಿ ಬೇರೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಶಶಿಧರನ್ ಎಫ್ಐಆರ್ ಪ್ರತಿಯನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. </p><p>2022ರ ಮೇ 5ರಂದು ಮಲಯಾಳ ನಟಿ ಮಂಜು ವಾರಿಯರ್ ಅವರಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಶಶಿಧರನ್ ಅವರನ್ನು ಪೊಲೀಸರು ಬಂಧಿಸಿದ್ದರು. </p><p>ಸಾಮಾಜಿಕ ಮಾಧ್ಯಮದಲ್ಲಿ ಅಪಪ್ರಚಾರ ಮಾಡುವ ಮೂಲಕ ತಮ್ಮ ಘನತೆಗೆ ಧಕ್ಕೆ ತಂದಿದ್ದಾರೆ ಹಾಗೂ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಶಶಿಧರನ್ ವಿರುದ್ಧ ಮಂಜು ವಾರಿಯರ್ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಖ್ಯಾತ ನಟಿಯೊಬ್ಬರಿಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡಿದ ಆರೋಪದ ಮೇಲೆ ಮಲಯಾಳಂ ಖ್ಯಾತ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಸನಲ್ ಕುಮಾರ್ ಶಶಿಧರನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಶಶಿಧರನ್ ವಿರುದ್ಧ ಹಿಂಬಾಲಿಸುವಿಕೆ, ಕ್ರಿಮಿನಲ್ ಬೆದರಿಕೆ ಮತ್ತು ಮಾನಹಾನಿಗೆ ಸಂಬಂಧಿಸಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ವಿವಿಧ ಸೆಕ್ಷನ್ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಏಳಮಕ್ಕರ ಪೊಲೀಸರು ಮಾಹಿತಿ ನೀಡಿದ್ದಾರೆ. </p><p>ನಟಿಯ ಹೆಸರಿನಲ್ಲಿ ಬೇರೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಶಶಿಧರನ್ ಎಫ್ಐಆರ್ ಪ್ರತಿಯನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. </p><p>2022ರ ಮೇ 5ರಂದು ಮಲಯಾಳ ನಟಿ ಮಂಜು ವಾರಿಯರ್ ಅವರಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ಶಶಿಧರನ್ ಅವರನ್ನು ಪೊಲೀಸರು ಬಂಧಿಸಿದ್ದರು. </p><p>ಸಾಮಾಜಿಕ ಮಾಧ್ಯಮದಲ್ಲಿ ಅಪಪ್ರಚಾರ ಮಾಡುವ ಮೂಲಕ ತಮ್ಮ ಘನತೆಗೆ ಧಕ್ಕೆ ತಂದಿದ್ದಾರೆ ಹಾಗೂ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಿ ಶಶಿಧರನ್ ವಿರುದ್ಧ ಮಂಜು ವಾರಿಯರ್ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>