<p>ಮಲಯಾಳಂನ 'ರಾಜವಿಂತೆ ಮಗನ್' ಸಿನಿಮಾದ ಮೂಲಕ ಖ್ಯಾತಿ ಗಳಿಸಿದ್ದ ಜನಪ್ರಿಯ ಸಂಗೀತ ನಿರ್ದೇಶಕ ಎಸ್. ಪಿ. ವೆಂಕಟೇಶ್ (70) ಮಂಗಳವಾರ ಹೃದಯಾಘಾತದಿಂದ ಚೆನ್ನೈನ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎಂದು ಚಲನಚಿತ್ರೋದ್ಯಮದ ಮೂಲಗಳು ತಿಳಿಸಿವೆ.</p><p>ವೆಂಕಟೇಶ್ ಅವರು ಸಂಗೀತರಾಜನ್ ಎಂದೇ ಹೆಸರು ಪಡೆದಿದ್ದರು. ಮಲಯಾಳಂನ ಖ್ಯಾತ ನಟರಾದ ಮೋಹನ್ ಲಾಲ್ ಮತ್ತು ಮಮ್ಮುಟ್ಟಿಯಂತಹ ಹಿರಿಯ ನಟರೊಂದಿಗೆ ಕೆಲಸ ಮಾಡಿದ್ದಾರೆ. ಮೆಲೋಡಿ ಗೀತೆಗಳಿಗೆ ಹೆಸರುವಾಸಿಯಾಗಿದ್ದರು.</p>.ವಿಡಂಬನೆ ಮೂಲಕ ಜಾಗೃತಿ ಮೂಡಿಸಿದ್ದ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್.<p>1955ರ ಮಾರ್ಚ್ 5ರಂದು ವೆಂಕಟೇಶ್ ಜನಿಸಿದರು. ಆರಂಭದಲ್ಲಿ ಸಂಗೀತ ನಿರ್ದೇಶಕ ವಿಜಯ್ ಭಾಸ್ಕರ್ ಅವರೊಂದಿಗೆ ಚಲನಚಿತ್ರಗಳಲ್ಲಿ ಗಿಟಾರ್ ನುಡಿಸುತ್ತಿದ್ದರು.</p><p>ಬಳಿಕ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಚಲನಚಿತ್ರಗಳಲ್ಲಿ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.</p><p>1985ರಲ್ಲಿ 'ಜಾನಕೀಯ ಕೊಡತಿ' ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಮಲಯಾಳಂ ಚಿತ್ರರಂಗಕ್ಕೆ ಪ್ರವೇಶಿಸಿದರು. 1993ರಲ್ಲಿ 'ಪೈತೃಕಂ' ಮತ್ತು 'ಜನಮ್' ಚಿತ್ರಗಳಿಗೆ ‘ಅತ್ಯುತ್ತಮ ಸಂಗೀತ ನಿರ್ದೇಶಕ’ ಎಂಬ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.</p><p>ಕನ್ನಡದ ಸಿನಿಮಾಗಳಾದ ‘ಮೇಘವರ್ಷಿಣಿ’, ‘ನಿಮ್ಮ ಪ್ರೀತಿಯ ಹುಡುಗ’ ಮತ್ತು ‘ಅರಗಿಣಿ‘ಯಲ್ಲಿ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.</p>.<p>ವೆಂಕಟೇಶ್ ಅವರು 'ಭೂಮಿಯಲ್ಲಿ ರಾಜಕ್ಕನ್ಮಾರ್', 'ವಾಳಿಯೋರ ಕಜ್ಜಕಲ್', 'ಇಂದ್ರಜಾಲಂ', 'ನಾಡೋಡಿ', 'ಮಾಂತ್ರಿಕಂ', 'ಕಿಲುಕ್ಕಂ', 'ಮಿನ್ನಾರಂ', 'ಸ್ಫಡಿಕಂ', ಮತ್ತು 'ಜಾನಿ ವಾಕರ್' ಚಿತ್ರಗಳಲ್ಲಿ ಜನಪ್ರಿಯ ಹಾಡುಗಳಿಗೆ ಸಂಗೀತ ನಿರ್ದೇಶಿಸಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ 150ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲಯಾಳಂನ 'ರಾಜವಿಂತೆ ಮಗನ್' ಸಿನಿಮಾದ ಮೂಲಕ ಖ್ಯಾತಿ ಗಳಿಸಿದ್ದ ಜನಪ್ರಿಯ ಸಂಗೀತ ನಿರ್ದೇಶಕ ಎಸ್. ಪಿ. ವೆಂಕಟೇಶ್ (70) ಮಂಗಳವಾರ ಹೃದಯಾಘಾತದಿಂದ ಚೆನ್ನೈನ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎಂದು ಚಲನಚಿತ್ರೋದ್ಯಮದ ಮೂಲಗಳು ತಿಳಿಸಿವೆ.</p><p>ವೆಂಕಟೇಶ್ ಅವರು ಸಂಗೀತರಾಜನ್ ಎಂದೇ ಹೆಸರು ಪಡೆದಿದ್ದರು. ಮಲಯಾಳಂನ ಖ್ಯಾತ ನಟರಾದ ಮೋಹನ್ ಲಾಲ್ ಮತ್ತು ಮಮ್ಮುಟ್ಟಿಯಂತಹ ಹಿರಿಯ ನಟರೊಂದಿಗೆ ಕೆಲಸ ಮಾಡಿದ್ದಾರೆ. ಮೆಲೋಡಿ ಗೀತೆಗಳಿಗೆ ಹೆಸರುವಾಸಿಯಾಗಿದ್ದರು.</p>.ವಿಡಂಬನೆ ಮೂಲಕ ಜಾಗೃತಿ ಮೂಡಿಸಿದ್ದ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್.<p>1955ರ ಮಾರ್ಚ್ 5ರಂದು ವೆಂಕಟೇಶ್ ಜನಿಸಿದರು. ಆರಂಭದಲ್ಲಿ ಸಂಗೀತ ನಿರ್ದೇಶಕ ವಿಜಯ್ ಭಾಸ್ಕರ್ ಅವರೊಂದಿಗೆ ಚಲನಚಿತ್ರಗಳಲ್ಲಿ ಗಿಟಾರ್ ನುಡಿಸುತ್ತಿದ್ದರು.</p><p>ಬಳಿಕ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಚಲನಚಿತ್ರಗಳಲ್ಲಿ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.</p><p>1985ರಲ್ಲಿ 'ಜಾನಕೀಯ ಕೊಡತಿ' ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಮಲಯಾಳಂ ಚಿತ್ರರಂಗಕ್ಕೆ ಪ್ರವೇಶಿಸಿದರು. 1993ರಲ್ಲಿ 'ಪೈತೃಕಂ' ಮತ್ತು 'ಜನಮ್' ಚಿತ್ರಗಳಿಗೆ ‘ಅತ್ಯುತ್ತಮ ಸಂಗೀತ ನಿರ್ದೇಶಕ’ ಎಂಬ ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದ್ದಾರೆ.</p><p>ಕನ್ನಡದ ಸಿನಿಮಾಗಳಾದ ‘ಮೇಘವರ್ಷಿಣಿ’, ‘ನಿಮ್ಮ ಪ್ರೀತಿಯ ಹುಡುಗ’ ಮತ್ತು ‘ಅರಗಿಣಿ‘ಯಲ್ಲಿ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.</p>.<p>ವೆಂಕಟೇಶ್ ಅವರು 'ಭೂಮಿಯಲ್ಲಿ ರಾಜಕ್ಕನ್ಮಾರ್', 'ವಾಳಿಯೋರ ಕಜ್ಜಕಲ್', 'ಇಂದ್ರಜಾಲಂ', 'ನಾಡೋಡಿ', 'ಮಾಂತ್ರಿಕಂ', 'ಕಿಲುಕ್ಕಂ', 'ಮಿನ್ನಾರಂ', 'ಸ್ಫಡಿಕಂ', ಮತ್ತು 'ಜಾನಿ ವಾಕರ್' ಚಿತ್ರಗಳಲ್ಲಿ ಜನಪ್ರಿಯ ಹಾಡುಗಳಿಗೆ ಸಂಗೀತ ನಿರ್ದೇಶಿಸಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ 150ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>