<p>ಮಲಯಾಳ ಚಿತ್ರರಂಗದ ಹೆಸರಾಂತ ನಿರ್ದೇಶಕ ಅಡೂರು ಗೋಪಾಲ ಕೃಷ್ಣನ್ ಮತ್ತು ಮಮ್ಮೂಟಿ ಒಟ್ಟಿಗೆ ಸಿನಿಮಾ ಮಾಡುತ್ತಿರುವುದು ಕೆಲ ದಿನಗಳ ಹಿಂದೆ ಸುದ್ದಿಯಾಗಿತ್ತು. ಈ ಚಿತ್ರದಲ್ಲಿ ನಯನತಾರಾ ಕೂಡ ನಟಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.</p>.<p>ಒಂದು ಕಾಲಕ್ಕೆ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ಅಡೂರು ದಶಕಗಳ ಬಳಿಕ ಮತ್ತೆ ಕಮರ್ಷಿಯಲ್ ಸಿನಿಮಾ ನಿರ್ದೇಶನಕ್ಕೆ ಮರಳಿದ್ದಾರೆ. 1950ರ ಬಹು ಜನಪ್ರಿಯ ಕಾದಂಬರಿ ‘ರಂಡಿಡಙಯಿ’ ಕಥೆ ಆಧಾರಿತ ಸಿನಿಮಾವಿದು. ‘ಚೋಮನ ದುಡಿ’ ರೀತಿಯದ್ದೇ ಕಥಾಹಂದರ ಹೊಂದಿರುವ ಚಿತ್ರ ಈ ತಿಂಗಳ ಅಂತ್ಯದಲ್ಲಿ ಸೆಟ್ಟೇರುವ ನಿರೀಕ್ಷೆಯಿದೆ.</p>.<p>ಅಡೂರು ಈ ಹಿಂದೆ ಮಮ್ಮೂಟಿಗೆ ‘ಮದಿಲುಗಳ್’, ‘ವಿಧೇಯನ್’ ಚಿತ್ರಗಳನ್ನು ನಿರ್ದೇಶಿಸಿದ್ದರು. ಮಮ್ಮೂಟಿ ಹಾಗೂ ನಯನತಾರಾ ‘ಪುದಿಯ ನಿಯಮಮ್’ ಸೇರಿದಂತೆ ಕೆಲ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದರು. ಹೀಗಾಗಿ ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ. </p>.<p>‘ಪ್ರೀಪ್ರೊಡಕ್ಷನ್ ಕೆಲಸಗಳು ಚಾಲ್ತಿಯಲ್ಲಿವೆ. ಈ ಪಾತ್ರಕ್ಕೆ ಮಮ್ಮೂಟಿ ಹೊರತಾಗಿ ಬೇರೆ ಯಾವ ನಟನೂ ಸೂಕ್ತವಲ್ಲ ಎನ್ನುವಂತಿದೆ. ಹೀಗಾಗಿ ಅವರ ಜತೆಯೇ ಈ ಸಿನಿಮಾ ಮಾಡಲು ನಿರ್ಧರಿಸಿದೆ’ ಎಂದು ಅಡೂರು ಈ ಹಿಂದೆ ಹೇಳಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲಯಾಳ ಚಿತ್ರರಂಗದ ಹೆಸರಾಂತ ನಿರ್ದೇಶಕ ಅಡೂರು ಗೋಪಾಲ ಕೃಷ್ಣನ್ ಮತ್ತು ಮಮ್ಮೂಟಿ ಒಟ್ಟಿಗೆ ಸಿನಿಮಾ ಮಾಡುತ್ತಿರುವುದು ಕೆಲ ದಿನಗಳ ಹಿಂದೆ ಸುದ್ದಿಯಾಗಿತ್ತು. ಈ ಚಿತ್ರದಲ್ಲಿ ನಯನತಾರಾ ಕೂಡ ನಟಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.</p>.<p>ಒಂದು ಕಾಲಕ್ಕೆ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ಅಡೂರು ದಶಕಗಳ ಬಳಿಕ ಮತ್ತೆ ಕಮರ್ಷಿಯಲ್ ಸಿನಿಮಾ ನಿರ್ದೇಶನಕ್ಕೆ ಮರಳಿದ್ದಾರೆ. 1950ರ ಬಹು ಜನಪ್ರಿಯ ಕಾದಂಬರಿ ‘ರಂಡಿಡಙಯಿ’ ಕಥೆ ಆಧಾರಿತ ಸಿನಿಮಾವಿದು. ‘ಚೋಮನ ದುಡಿ’ ರೀತಿಯದ್ದೇ ಕಥಾಹಂದರ ಹೊಂದಿರುವ ಚಿತ್ರ ಈ ತಿಂಗಳ ಅಂತ್ಯದಲ್ಲಿ ಸೆಟ್ಟೇರುವ ನಿರೀಕ್ಷೆಯಿದೆ.</p>.<p>ಅಡೂರು ಈ ಹಿಂದೆ ಮಮ್ಮೂಟಿಗೆ ‘ಮದಿಲುಗಳ್’, ‘ವಿಧೇಯನ್’ ಚಿತ್ರಗಳನ್ನು ನಿರ್ದೇಶಿಸಿದ್ದರು. ಮಮ್ಮೂಟಿ ಹಾಗೂ ನಯನತಾರಾ ‘ಪುದಿಯ ನಿಯಮಮ್’ ಸೇರಿದಂತೆ ಕೆಲ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದರು. ಹೀಗಾಗಿ ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ. </p>.<p>‘ಪ್ರೀಪ್ರೊಡಕ್ಷನ್ ಕೆಲಸಗಳು ಚಾಲ್ತಿಯಲ್ಲಿವೆ. ಈ ಪಾತ್ರಕ್ಕೆ ಮಮ್ಮೂಟಿ ಹೊರತಾಗಿ ಬೇರೆ ಯಾವ ನಟನೂ ಸೂಕ್ತವಲ್ಲ ಎನ್ನುವಂತಿದೆ. ಹೀಗಾಗಿ ಅವರ ಜತೆಯೇ ಈ ಸಿನಿಮಾ ಮಾಡಲು ನಿರ್ಧರಿಸಿದೆ’ ಎಂದು ಅಡೂರು ಈ ಹಿಂದೆ ಹೇಳಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>