<p>‘ಕಾಡು ಹಾಗೂ ಕಾಡುವ ಪಾತ್ರಗಳೇ ‘ಮನರೂಪ’ ಚಿತ್ರದ ಜೀವಾಳ’ ಎಂದು ಮಾತು ಆರಂಭಿಸಿದರು ನಿರ್ದೇಶಕ ಕಿರಣ ಹೆಗಡೆ.</p>.<p>ನವೆಂಬರ್ 22ರಂದು ಸಿನಿಮಾ ತೆರೆ ಕಾಣುತ್ತಿದೆ. ಇದರ ಪೂರ್ವಭಾವಿಯಾಗಿ ಚಿತ್ರತಂಡದೊಂದಿಗೆ ಆಗಮಿಸಿದ್ದ ಅವರು, ಟ್ರೇಲರ್ ಬಿಡುಗಡೆಗೊಳಿಸಿ ಮಾತಿಗಿಳಿದರು.</p>.<p>‘ಚಿತ್ರದಲ್ಲಿ ನೋಡುಗರಿಗೆ ಥ್ರಿಲ್ ನೀಡುವ ಅಂಶಗಳಿವೆ. ಕೌಟುಂಬಿಕ ವ್ಯವಸ್ಥೆ, ವ್ಯಕ್ತಿತ್ವ, ಅಸ್ತಿತ್ವ ಮತ್ತು ಇರುವಿಕೆಯ ವಿವಿಧ ಮಜಲನ್ನು ಚಿತ್ರ ಬಿಚ್ಚಿಡುತ್ತದೆ. ಇದು ಹೊಸ ಬಗೆಯ ಕಥೆ, ನಿರೂಪಣೆ ಹೊಂದಿರುವ ಸಿನಿಮಾ’ ಎಂದು ವಿವರಿಸಿದರು.</p>.<p>1981ರಿಂದ 1996ರ ನಡುವೆ ಜನಿಸಿದವರ ಬದುಕಿನ ಕಥೆ ಇದು. ಈ ಅವಧಿಯಲ್ಲಿ ಜನಿಸಿದವರು ಎಲ್ಲಿಯೂ ಗಟ್ಟಿಯಾಗಿ ನೆಲೆಯೂರುವುದಿಲ್ಲವಂತೆ. ಅವರಲ್ಲಿ ಸ್ವಾರ್ಥ ಮನೆ ಮಾಡಿರುತ್ತದೆ. ಅತಿಯಾಗಿ ತಮ್ಮನ್ನೇ ತಾವು ಪ್ರೀತಿಸುತ್ತಾರಂತೆ. ಎಲ್ಲರೂ ತಮ್ಮನ್ನೇ ಗಮನಿಸಬೇಕು ಎಂಬ ಮನೋಧರ್ಮದವರು. ಅಪರೂಪದ ಸಂಗತಿ ಅರಸಿಕೊಂಡು ತಿರುಗಾಡುವುದರಲ್ಲಿ ಅವರ ಸದಾ ಮುಂದು. ಅಂತಹ ಯುವಜನರ ಕಥೆಯೇ ಈ ಸಿನಿಮಾದ ಹೂರಣ.</p>.<p>ಸೈಕಲಾಜಿಕಲ್ ಕ್ರೈಮ್, ಥ್ರಿಲ್ಲರ್ ಸಿನಿಮಾ ಇದಾಗಿದೆ. ಶೂಟಿಂಗ್ ನಡೆದಿರುವುದು ಶಿರಸಿ ಮತ್ತು ಸಿದ್ದಾಪುರದ ಕಾಡಿನಲ್ಲಿ. ಐವರು ಸ್ನೇಹಿತರಿಗೆ ಗುಮ್ಮ ಯಾವ ಪರಿಯಾಗಿ ಕಾಟ ನೀಡುತ್ತದೆ, ಅವರು ಹೇಗೆ ಪೀಕಲಾಟ ಅನುಭವಿಸುತ್ತಾರೆ ಎನ್ನುವುದೇ ಚಿತ್ರದ ಕಥಾಹಂದರ.</p>.<p>ದಿಲೀಪ್ ಕುಮಾರ್, ಅನುಷಾ ರಾವ್, ನಿಶಾ ಬಿ.ಆರ್., ಆರ್ಯನ್, ಶಿವಪ್ರಸಾದ್, ಅಮೋಘ್ ಸಿದ್ಧಾರ್ಥ್, ಗಜಾ ನೀನಾಸಂ, ಪ್ರಜ್ವಲ್ ಗೌಡ, ರಮಾನಂದ ಐನಕೈ, ಸತೀಶ್ ಗೋಳಿಕೊಪ್ಪ ತಾರಾಗಣದಲ್ಲಿದ್ದಾರೆ. ವಿಶೇಷ ಪಾತ್ರದಲ್ಲಿ ಬಿ. ಸುರೇಶ್ ಕಾಣಿಸಿಕೊಂಡಿದ್ದಾರೆ.</p>.<p>ಸಿ.ಎಂ.ಸಿ.ಆರ್. ಮೂವೀಸ್ನಡಿ ಚಿತ್ರ ನಿರ್ಮಿಸ ಲಾಗಿದೆ.ಗೋವಿಂದರಾಜ್ ಅವರ ಛಾಯಾಗ್ರಹಣವಿದೆ. ಸರ್ವಣ ಸಂಗೀತ ಸಂಯೋಜಿಸಿದ್ದಾರೆ. ಸೂರಿ, ಲೋಕಿ ಅವರ ಸಂಕಲನವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಕಾಡು ಹಾಗೂ ಕಾಡುವ ಪಾತ್ರಗಳೇ ‘ಮನರೂಪ’ ಚಿತ್ರದ ಜೀವಾಳ’ ಎಂದು ಮಾತು ಆರಂಭಿಸಿದರು ನಿರ್ದೇಶಕ ಕಿರಣ ಹೆಗಡೆ.</p>.<p>ನವೆಂಬರ್ 22ರಂದು ಸಿನಿಮಾ ತೆರೆ ಕಾಣುತ್ತಿದೆ. ಇದರ ಪೂರ್ವಭಾವಿಯಾಗಿ ಚಿತ್ರತಂಡದೊಂದಿಗೆ ಆಗಮಿಸಿದ್ದ ಅವರು, ಟ್ರೇಲರ್ ಬಿಡುಗಡೆಗೊಳಿಸಿ ಮಾತಿಗಿಳಿದರು.</p>.<p>‘ಚಿತ್ರದಲ್ಲಿ ನೋಡುಗರಿಗೆ ಥ್ರಿಲ್ ನೀಡುವ ಅಂಶಗಳಿವೆ. ಕೌಟುಂಬಿಕ ವ್ಯವಸ್ಥೆ, ವ್ಯಕ್ತಿತ್ವ, ಅಸ್ತಿತ್ವ ಮತ್ತು ಇರುವಿಕೆಯ ವಿವಿಧ ಮಜಲನ್ನು ಚಿತ್ರ ಬಿಚ್ಚಿಡುತ್ತದೆ. ಇದು ಹೊಸ ಬಗೆಯ ಕಥೆ, ನಿರೂಪಣೆ ಹೊಂದಿರುವ ಸಿನಿಮಾ’ ಎಂದು ವಿವರಿಸಿದರು.</p>.<p>1981ರಿಂದ 1996ರ ನಡುವೆ ಜನಿಸಿದವರ ಬದುಕಿನ ಕಥೆ ಇದು. ಈ ಅವಧಿಯಲ್ಲಿ ಜನಿಸಿದವರು ಎಲ್ಲಿಯೂ ಗಟ್ಟಿಯಾಗಿ ನೆಲೆಯೂರುವುದಿಲ್ಲವಂತೆ. ಅವರಲ್ಲಿ ಸ್ವಾರ್ಥ ಮನೆ ಮಾಡಿರುತ್ತದೆ. ಅತಿಯಾಗಿ ತಮ್ಮನ್ನೇ ತಾವು ಪ್ರೀತಿಸುತ್ತಾರಂತೆ. ಎಲ್ಲರೂ ತಮ್ಮನ್ನೇ ಗಮನಿಸಬೇಕು ಎಂಬ ಮನೋಧರ್ಮದವರು. ಅಪರೂಪದ ಸಂಗತಿ ಅರಸಿಕೊಂಡು ತಿರುಗಾಡುವುದರಲ್ಲಿ ಅವರ ಸದಾ ಮುಂದು. ಅಂತಹ ಯುವಜನರ ಕಥೆಯೇ ಈ ಸಿನಿಮಾದ ಹೂರಣ.</p>.<p>ಸೈಕಲಾಜಿಕಲ್ ಕ್ರೈಮ್, ಥ್ರಿಲ್ಲರ್ ಸಿನಿಮಾ ಇದಾಗಿದೆ. ಶೂಟಿಂಗ್ ನಡೆದಿರುವುದು ಶಿರಸಿ ಮತ್ತು ಸಿದ್ದಾಪುರದ ಕಾಡಿನಲ್ಲಿ. ಐವರು ಸ್ನೇಹಿತರಿಗೆ ಗುಮ್ಮ ಯಾವ ಪರಿಯಾಗಿ ಕಾಟ ನೀಡುತ್ತದೆ, ಅವರು ಹೇಗೆ ಪೀಕಲಾಟ ಅನುಭವಿಸುತ್ತಾರೆ ಎನ್ನುವುದೇ ಚಿತ್ರದ ಕಥಾಹಂದರ.</p>.<p>ದಿಲೀಪ್ ಕುಮಾರ್, ಅನುಷಾ ರಾವ್, ನಿಶಾ ಬಿ.ಆರ್., ಆರ್ಯನ್, ಶಿವಪ್ರಸಾದ್, ಅಮೋಘ್ ಸಿದ್ಧಾರ್ಥ್, ಗಜಾ ನೀನಾಸಂ, ಪ್ರಜ್ವಲ್ ಗೌಡ, ರಮಾನಂದ ಐನಕೈ, ಸತೀಶ್ ಗೋಳಿಕೊಪ್ಪ ತಾರಾಗಣದಲ್ಲಿದ್ದಾರೆ. ವಿಶೇಷ ಪಾತ್ರದಲ್ಲಿ ಬಿ. ಸುರೇಶ್ ಕಾಣಿಸಿಕೊಂಡಿದ್ದಾರೆ.</p>.<p>ಸಿ.ಎಂ.ಸಿ.ಆರ್. ಮೂವೀಸ್ನಡಿ ಚಿತ್ರ ನಿರ್ಮಿಸ ಲಾಗಿದೆ.ಗೋವಿಂದರಾಜ್ ಅವರ ಛಾಯಾಗ್ರಹಣವಿದೆ. ಸರ್ವಣ ಸಂಗೀತ ಸಂಯೋಜಿಸಿದ್ದಾರೆ. ಸೂರಿ, ಲೋಕಿ ಅವರ ಸಂಕಲನವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>