‘ತನ್ನ ಮಗನನ್ನೇ ನಾಯಕ ನಟನನ್ನಾಗಿ ಮಾಡಿ ನಾನು ನಿರ್ಮಾಣ ಮಾಡುತ್ತಿರುವ ಎರಡನೇ ಚಿತ್ರವಿದು. ಮಂಡ್ಯ ನನ್ನ ಊರು. ಚಿತ್ರದ ಕಥಾಹಂದರವೂ ಹಳ್ಳಿಯ ಕಥೆಯನ್ನು ಒಳಗೊಂಡಿದ್ದು, ಮಂಡ್ಯದಲ್ಲೇ ಹೆಚ್ಚಿನ ಚಿತ್ರೀಕರಣ ನಡೆಯಲಿದೆ. ವಿ.ಶ್ರೀಕಾಂತ್ ನಿರ್ದೇಶನದ ಈ ಚಿತ್ರಕ್ಕೆ ಥ್ರಿಲ್ಲರ್ ಮಂಜು ಅವರು ಎರಡು ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಲಿದ್ದಾರೆ. ‘ಕಾಮಿಡಿ ಕಿಲಾಡಿಗಳು’ ತಂಡದ 15 ಕಲಾವಿದರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಪ್ರೀತಿ, ಸ್ನೇಹದ ಕಥಾಹಂದರ ಹೊಂದಿರುವ ಈ ಚಿತ್ರವು ಮಾಸ್ ಸಬ್ಜೆಕ್ಟ್ ಒಳಗೊಂಡಿದೆ’ ಎನ್ನುತ್ತಾರೆ ಚಂದ್ರಶೇಖರ್.