<p><strong>ನವದೆಹಲಿ</strong>: ‘ನೀರಜ್ ಪಾಂಡೆ ಅವರ ನಿರ್ದೇಶನದ, ನಟ ಮನೋಜ್ ಬಾಜಪೇಯಿ ನಟನೆಯ ವಿವಾದಿತ ‘ಘೂಸಖೋರ್ ಪಂಡಿತ್’ (ಘೂಸಖೋರ್ ಪಂಡತ್) ಸಿನಿಮಾದ ಹೆಸರು ಬದಲಾವಣೆಗೆ ನಿರ್ಮಾಪಕರು ಸಮ್ಮತಿಸಿದ್ದು ಈ ಕುರಿತ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಲೇವಾರಿಗೊಳಿಸಿದೆ.</p><p>ವಿವಾದಿತ ಹೆಸರಿನ ಸಿನಿಮಾ ಬಿಡುಗಡೆ ತಡೆಹಿಡಿಯುವಂತೆ ‘ಭಾರತೀಯ ಬ್ರಾಹ್ಮಣ ಸಮಾಜ’ದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಅತುಲ್ ಮಿಶ್ರಾ ಅರ್ಜಿ ಸಲ್ಲಿಸಿದ್ದರು.</p><p>ಸಿನಿಮಾದ ಹೆಸರು ಬದಲಾವಣೆಗೆ ನಿರ್ಮಾಪಕರು ಸಮ್ಮತಿಸಿದ್ದರಿಂದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಅರ್ಜಿಯನ್ನು ವಿಲೇವಾರಿ ಮಾಡಿತು.</p>.<p>ಸಿನಿಮಾಗೆ ಬೇರೆ ಹೆಸರು ಇಡಬೇಕು ಎಂದು ಪೀಠ ತಾಕೀತು ಮಾಡಿ, ‘ಯಾವ ಹೆಸರು ಇಡಲಿದ್ದೀರಿ ಎನ್ನುವ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ. ಶೀರ್ಷಿಕೆ ಬದಲಾವಣೆ ಬಗ್ಗೆ ನಮಗೆ ಮಾಹಿತಿ ನೀಡುವವರೆಗೂ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ’ ಎಂದು ಈ ಹಿಂದೆ ಎಚ್ಚರಿಸಿತ್ತು. </p><p>ಹೆಸರು ಬದಲಾವಣೆಗೆ ನಾವು ನಿರ್ಧರಿಸಿದ್ದು, ಆದರೆ, ಇನ್ನೂ ಹೊಸ ಹೆಸರನ್ನು ಅಂತಿಮಗೊಳಿಸಿಲ್ಲ. ಯಾವುದೇ ಸಂಘರ್ಷ ಉದ್ಭವಿಸದಂತೆ ಹೆಸರು ಇಡಲಾಗುವುದು ಎಂದು ನಿರ್ದೇಶಕ ನೀರಜ್ ಪಾಂಡೆ ಸುಪ್ರೀಂಕೋರ್ಟ್ಗೆ ತಿಳಿಸಿದ್ದಾರೆ.</p><p>ಸಿನಿಮಾಗೆ ಇಂಥ ಹೆಸರಿಟ್ಟು ಸಮಾಜದ ಒಂದು ವರ್ಗದ ಜನರನ್ನು ಅವಹೇಳನ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಆಕ್ರೋಶ ವ್ಯಕ್ತಪಡಿಸಿದೆ.</p><p>‘ಘೂಸಖೋರ್ ಪಂಡಿತ್’ ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಗೆ ಸಿದ್ದವಾಗಿದೆ. ಪಂಡಿತ್ ಸಮುದಾಯಕ್ಕೆ ಅವಹೇಳನ ಮಾಡುವ ರೀತಿಯಲ್ಲಿ ಟೈಟಲ್ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ನೀರಜ್ ಪಾಂಡೆ ಅವರ ನಿರ್ದೇಶನದ, ನಟ ಮನೋಜ್ ಬಾಜಪೇಯಿ ನಟನೆಯ ವಿವಾದಿತ ‘ಘೂಸಖೋರ್ ಪಂಡಿತ್’ (ಘೂಸಖೋರ್ ಪಂಡತ್) ಸಿನಿಮಾದ ಹೆಸರು ಬದಲಾವಣೆಗೆ ನಿರ್ಮಾಪಕರು ಸಮ್ಮತಿಸಿದ್ದು ಈ ಕುರಿತ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಲೇವಾರಿಗೊಳಿಸಿದೆ.</p><p>ವಿವಾದಿತ ಹೆಸರಿನ ಸಿನಿಮಾ ಬಿಡುಗಡೆ ತಡೆಹಿಡಿಯುವಂತೆ ‘ಭಾರತೀಯ ಬ್ರಾಹ್ಮಣ ಸಮಾಜ’ದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಅತುಲ್ ಮಿಶ್ರಾ ಅರ್ಜಿ ಸಲ್ಲಿಸಿದ್ದರು.</p><p>ಸಿನಿಮಾದ ಹೆಸರು ಬದಲಾವಣೆಗೆ ನಿರ್ಮಾಪಕರು ಸಮ್ಮತಿಸಿದ್ದರಿಂದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಅರ್ಜಿಯನ್ನು ವಿಲೇವಾರಿ ಮಾಡಿತು.</p>.<p>ಸಿನಿಮಾಗೆ ಬೇರೆ ಹೆಸರು ಇಡಬೇಕು ಎಂದು ಪೀಠ ತಾಕೀತು ಮಾಡಿ, ‘ಯಾವ ಹೆಸರು ಇಡಲಿದ್ದೀರಿ ಎನ್ನುವ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ. ಶೀರ್ಷಿಕೆ ಬದಲಾವಣೆ ಬಗ್ಗೆ ನಮಗೆ ಮಾಹಿತಿ ನೀಡುವವರೆಗೂ ಚಿತ್ರ ಬಿಡುಗಡೆಗೆ ಅವಕಾಶ ನೀಡುವುದಿಲ್ಲ’ ಎಂದು ಈ ಹಿಂದೆ ಎಚ್ಚರಿಸಿತ್ತು. </p><p>ಹೆಸರು ಬದಲಾವಣೆಗೆ ನಾವು ನಿರ್ಧರಿಸಿದ್ದು, ಆದರೆ, ಇನ್ನೂ ಹೊಸ ಹೆಸರನ್ನು ಅಂತಿಮಗೊಳಿಸಿಲ್ಲ. ಯಾವುದೇ ಸಂಘರ್ಷ ಉದ್ಭವಿಸದಂತೆ ಹೆಸರು ಇಡಲಾಗುವುದು ಎಂದು ನಿರ್ದೇಶಕ ನೀರಜ್ ಪಾಂಡೆ ಸುಪ್ರೀಂಕೋರ್ಟ್ಗೆ ತಿಳಿಸಿದ್ದಾರೆ.</p><p>ಸಿನಿಮಾಗೆ ಇಂಥ ಹೆಸರಿಟ್ಟು ಸಮಾಜದ ಒಂದು ವರ್ಗದ ಜನರನ್ನು ಅವಹೇಳನ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಆಕ್ರೋಶ ವ್ಯಕ್ತಪಡಿಸಿದೆ.</p><p>‘ಘೂಸಖೋರ್ ಪಂಡಿತ್’ ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಗೆ ಸಿದ್ದವಾಗಿದೆ. ಪಂಡಿತ್ ಸಮುದಾಯಕ್ಕೆ ಅವಹೇಳನ ಮಾಡುವ ರೀತಿಯಲ್ಲಿ ಟೈಟಲ್ ನೀಡಲಾಗಿತ್ತು ಎಂದು ಆರೋಪಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>