ಇತ್ತೀಚೆಗಷ್ಟೇ ಚಿತ್ರದ ವಿಡಿಯೊ ಹಾಡು ‘ತಾರೀಫು ಮಾಡಲು ತಾರೀಕು ಮೂಡಿದೆ’ ಬಿಡುಗಡೆಯಾಗಿತ್ತು. ಚಿತ್ರಕ್ಕೆ ಶ್ರೀಧರ್ ಸಂಭ್ರಮ್ ಅವರ ಸಂಗೀತವಿದೆ. ಮನೋರಂಜನ್ ಅವರಿಗೆ ಕಯಾದು ಲೋಹರ್ ನಾಯಕಿ. ಭರತ್ ಎಸ್. ನಾವುಂದ ರಚನೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಮೋತಿ ಮೂವಿ ಮೇಕರ್ಸ್ ಲಾಂಛನದಲ್ಲಿ ರಕ್ಷಾ ವಿಜಯ್ ಕುಮಾರ್ ನಿರ್ಮಿಸಿದ್ದಾರೆ. ದೀಪಾವಳಿಗೆ ಚಿತ್ರ ತೆರೆಗೆ ಬರಲಿದೆ. ರಿಷಿ, ಅವಿನಾಶ್, ತಾರಾ ಅನುರಾಧ, ಸಾಧುಕೋಕಿಲ, ರಂಗಾಯಣ ರಘು ತಾರಾಗಣದಲ್ಲಿದ್ದಾರೆ.