‘ಸಿನಿಮಾದ ಪ್ರಮುಖ ಪಾತ್ರದಲ್ಲಿ ಶೃಂಗಾ, ಕೃಷ್ಣಾ ಹೆಬ್ಬಾಳೆ, ಬಾಲಾಜಿ ಮನೋಹರ್, ಸಂಪತ್ ಕುಮಾರ್, ವೆಂಕಟೇಶ್ ಪ್ರಸಾದ್ ಕಾಣಿಸಿಕೊಳ್ಳಲಿದ್ದು, ಸಿನಿಮಾ ಹಾಗೂ ರಂಗಭೂಮಿಯ ಹಲವು ಕಲಾವಿದರು ನಟಿಸುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣವನ್ನು ಧಾರವಾಡ, ಯಲ್ಲಾಪುರ, ಕರಾವಳಿಯ ಪ್ರಮುಖ ಸ್ಥಳಗಳಲ್ಲಿ ಮಾಡಲು ಸಿದ್ಧತೆ ಆರಂಭಿಸಿದ್ದು, ಚಿತ್ರೀಕರಣ ಪೂರ್ವದ ತಯಾರಿ ಪೂರ್ಣಗೊಳಿಸಿ ಶೀಘ್ರದಲ್ಲೇ ಚಿತ್ರೀಕರಣವನ್ನು ಆರಂಭಿಸಲಿದ್ದೇವೆ’ ಎಂದಿದ್ದಾರೆ ಮಂಸೋರೆ.