ಬೆಂಗಳೂರು: ಲಾಕ್ಡೌನ್ ಕಾರಣದಿಂದಾಗಿ ಸಿನಿಮಾ ಚಿತ್ರೀಕರಣವೆಲ್ಲ ಸ್ಥಗಿತವಾಗಿದ್ದು, ಈ ಕ್ಷೇತ್ರದಲ್ಲಿ ದಿನಗೂಲಿಗೆ ಕಾರ್ಯನಿರ್ವಹಿಸುತ್ತಿರುವ ಸಾವಿರಾರು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಕಾರ್ಮಿಕರ ಹಲವು ಖ್ಯಾತ ನಟ–ನಟಿಯರು ನೆರವು ನೀಡುತ್ತಿದ್ದಾರೆ. ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ಅವರೂ ಈ ನಿಟ್ಟಿನಲ್ಲಿ ಹೆಜ್ಜೆ ಇರಿಸಿದ್ದಾರೆ.