ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚೆನಶೆಟ್ಟಿ ಮಾತನಾಡಿ, ‘ಗಡಿ ಜಿಲ್ಲೆಯ ಅಪ್ಪಟ ಕನ್ನಡದ ಪ್ರತಿಭೆ ನಾಗರಾಜ್ ಜೋಗಿ ಅವರು ಚಲನಚಿತ್ರದಲ್ಲಿ ಮಿಂಚುತ್ತಿರುವುದು ನಮಗೆಲ್ಲ ಖುಷಿ ತಂದಿದೆ. ಎಲ್ಲರೂ ಒಟ್ಟಿಗೆ ಕುಳಿತು ನೋಡಬಹುದಾದ ಕಿರುಚಿತ್ರ ಇದಾಗಿದೆ. ಪ್ರತಿಯೊಬ್ಬರು ಚಿತ್ರವೀಕ್ಷಿಸಿ ಗಡಿ ಕಲಾವಿದರನ್ನು ಪ್ರೋತ್ಸಾಹಿಸಬೇಕು’ ಎಂದು ಮನವಿ ಮಾಡಿದರು.