<p><strong>ನಾಂದೇಡ್ (ಮಹಾರಾಷ್ಟ್ರ): </strong>ಮರಾಠಿ ನಟ ಅಶುತೋಷ್ ಭಾಕ್ರೆ ಮರಾಠವಾಡಪ್ರಾಂತ್ಯದ ನಾಂದೇಡ್ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.</p>.<p>ನಿನ್ನೆ ಮಧ್ಯಾಹ್ನ 32 ವರ್ಷದ ಅಶುತೋಷ್ ಅವರ ಶವ ನಾಂದೇಡ್ನ ಗಣೇಶನಗರದ ಫ್ಯಾಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದುಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಖುಲ್ತಾ ಕಲಿ ಖುಲೇನಾ’ ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ ನಟಿ ಮಯೂರಿ ದೇಶ್ಮುಖ್ ಅವರ ಪತಿ ಅಶುತೋಷ್. ‘ಭಾಕರ್’ ಹಾಗೂ ‘ಇಚಾರ್ ಥರ್ಲಾ ಪಕ್ಕ’ ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದಾರೆ ಈ ನಟ.</p>.<p>ಆತ್ಮಹತ್ಯೆಗೆ ನಿಖರವಾದ ಕಾರಣಗಳು ತಿಳಿದುಬಂದಿಲ್ಲ ಎಂದಿದ್ದಾರೆ ಪೊಲೀಸರು.</p>.<p>ಆದರೆ ಇವರು ಕಳೆದ ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಅಲ್ಲದೇ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದು ಅದರಲ್ಲಿ ವ್ಯಕ್ತಿಯೊಬ್ಬ ಯಾವ ಕಾರಣಕ್ಕೆ ಸಾಯುತ್ತಾನೆ ಎಂಬುದನ್ನು ವಿಶ್ಲೇಷಿಸಿದ್ದರು ಎನ್ನುತ್ತಿವೆ ಅಧೀಕೃತ ಮೂಲಗಳು.</p>.<p>ನಾಂದೇಡ್ನ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಎಂದು ದೂರು ದಾಖಲಾಗಿದ್ದು, ಸಾವಿನ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಂದೇಡ್ (ಮಹಾರಾಷ್ಟ್ರ): </strong>ಮರಾಠಿ ನಟ ಅಶುತೋಷ್ ಭಾಕ್ರೆ ಮರಾಠವಾಡಪ್ರಾಂತ್ಯದ ನಾಂದೇಡ್ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.</p>.<p>ನಿನ್ನೆ ಮಧ್ಯಾಹ್ನ 32 ವರ್ಷದ ಅಶುತೋಷ್ ಅವರ ಶವ ನಾಂದೇಡ್ನ ಗಣೇಶನಗರದ ಫ್ಯಾಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದುಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಖುಲ್ತಾ ಕಲಿ ಖುಲೇನಾ’ ಧಾರಾವಾಹಿ ಮೂಲಕ ಖ್ಯಾತಿ ಗಳಿಸಿದ ನಟಿ ಮಯೂರಿ ದೇಶ್ಮುಖ್ ಅವರ ಪತಿ ಅಶುತೋಷ್. ‘ಭಾಕರ್’ ಹಾಗೂ ‘ಇಚಾರ್ ಥರ್ಲಾ ಪಕ್ಕ’ ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದಾರೆ ಈ ನಟ.</p>.<p>ಆತ್ಮಹತ್ಯೆಗೆ ನಿಖರವಾದ ಕಾರಣಗಳು ತಿಳಿದುಬಂದಿಲ್ಲ ಎಂದಿದ್ದಾರೆ ಪೊಲೀಸರು.</p>.<p>ಆದರೆ ಇವರು ಕಳೆದ ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು. ಅಲ್ಲದೇ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದು ಅದರಲ್ಲಿ ವ್ಯಕ್ತಿಯೊಬ್ಬ ಯಾವ ಕಾರಣಕ್ಕೆ ಸಾಯುತ್ತಾನೆ ಎಂಬುದನ್ನು ವಿಶ್ಲೇಷಿಸಿದ್ದರು ಎನ್ನುತ್ತಿವೆ ಅಧೀಕೃತ ಮೂಲಗಳು.</p>.<p>ನಾಂದೇಡ್ನ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಎಂದು ದೂರು ದಾಖಲಾಗಿದ್ದು, ಸಾವಿನ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>