ಮನೋಹರ್ ಕಾಂಪಲ್ಲಿ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರವನ್ನು ಪಾರ್ವತಿ ಎಸ್.ಗೌಡ ನಿರ್ಮಾಣ ಮಾಡಿದ್ದಾರೆ. ನಟರಾದ ನಾಗಭೂಷಣ್, ಪೂರ್ಣ, ಶಿವರಾಜ್ ಕೆ.ಆರ್.ಪೇಟೆ ಮತ್ತಿತರರು ಚಿತ್ರದ ತಾರಾಗಣದಲ್ಲಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಸಂಗೀತ ಚಿತ್ರಕ್ಕಿದೆ. ‘ಮ್ಯಾಟ್ನಿ’ ಜೊತೆಗೆ ತಮ್ಮ ಮುಂದಿನ ಪ್ಯಾನ್ ಇಂಡಿಯಾ ಸಿನಿಮಾ ‘ಅಶೋಕ ಬ್ಲೇಡ್’ ಬಗ್ಗೆಯೂ ಸತೀಶ್ ಅವರಿಗೆ ಸಾಕಷ್ಟು ನಿರೀಕ್ಷೆಗಳಿವೆ. ಈ ಸಿನಿಮಾ ಎರಡು ಭಾಗಗಳಲ್ಲಿ ತೆರೆಕಾಣುತ್ತಿದೆ.