<p>ಇತ್ತೀಚೆಗಷ್ಟೇ ಬಿಡುಗಡೆಗೊಂಡ ಧನಂಜಯ್ ಅಭಿನಯದ ‘ಗುರುದೇವ್ ಹೊಯ್ಸಳ’ ಚಿತ್ರದಲ್ಲಿ ‘ಭೂಮಿ’ ಪಾತ್ರದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು ಮಯೂರಿ ನಟರಾಜ್. ಈಗ ನಟ ರಕ್ಷಿತ್ ಶೆಟ್ಟಿಯವರ ಪರಂವಾ ಸ್ಟುಡಿಯೋಸ್ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ ಎರಡನೆಯ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.</p>.<p>ಚಿತ್ರದಲ್ಲಿ ಅವರ ಪಾತ್ರದ ಹೆಸರು ರಾಧೆ. ಚಿತ್ರತಂಡ ಮಯೂರಿ ಪಾತ್ರ ಪರಿಚಯಿಸುವ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆ. ಚಂದ್ರಜಿತ್ ಬೆಳ್ಳಿಯಪ್ಪ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರವು ಇದೀಗ ಮುಕ್ತಾಯ ಹಂತದಲ್ಲಿದೆ. ಈಗಾಗಲೇ ಮಯೂರಿ ನಟರಾಜ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ’ಎಂದು ಚಿತ್ರತಂಡ ಹೇಳಿದೆ.<br />ಮಯೂರಿ ಇದಕ್ಕೂ ಮೊದಲು ‘ಮ್ಯಾನ್ ಆಫ್ ದಿ ಮ್ಯಾಚ್’, ‘ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’ ಚಿತ್ರಗಳಲ್ಲಿ ನಟಿಸಿದ್ದರು. ‘ಇಬ್ಬನಿ ತಬ್ಬಿದ ಇಳೆಯಲಿ’ ಮೂರು ವಿಭಿನ್ನ ಕಾಲಘಟ್ಟದಲ್ಲಿ ನಡೆಯುವ ಚಿತ್ರವಾಗಿದೆ. ವಿಹಾನ್ ಮತ್ತು ಅಂಕಿತಾ ಅಮರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ ಮತ್ತು ಶ್ರೀವತ್ಸನ್ ಸೆಲ್ವರಾಜನ್ ಅವರ ಛಾಯಾಗ್ರಹಣವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಇತ್ತೀಚೆಗಷ್ಟೇ ಬಿಡುಗಡೆಗೊಂಡ ಧನಂಜಯ್ ಅಭಿನಯದ ‘ಗುರುದೇವ್ ಹೊಯ್ಸಳ’ ಚಿತ್ರದಲ್ಲಿ ‘ಭೂಮಿ’ ಪಾತ್ರದ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು ಮಯೂರಿ ನಟರಾಜ್. ಈಗ ನಟ ರಕ್ಷಿತ್ ಶೆಟ್ಟಿಯವರ ಪರಂವಾ ಸ್ಟುಡಿಯೋಸ್ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ ಎರಡನೆಯ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.</p>.<p>ಚಿತ್ರದಲ್ಲಿ ಅವರ ಪಾತ್ರದ ಹೆಸರು ರಾಧೆ. ಚಿತ್ರತಂಡ ಮಯೂರಿ ಪಾತ್ರ ಪರಿಚಯಿಸುವ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆ. ಚಂದ್ರಜಿತ್ ಬೆಳ್ಳಿಯಪ್ಪ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರವು ಇದೀಗ ಮುಕ್ತಾಯ ಹಂತದಲ್ಲಿದೆ. ಈಗಾಗಲೇ ಮಯೂರಿ ನಟರಾಜ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ’ಎಂದು ಚಿತ್ರತಂಡ ಹೇಳಿದೆ.<br />ಮಯೂರಿ ಇದಕ್ಕೂ ಮೊದಲು ‘ಮ್ಯಾನ್ ಆಫ್ ದಿ ಮ್ಯಾಚ್’, ‘ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’ ಚಿತ್ರಗಳಲ್ಲಿ ನಟಿಸಿದ್ದರು. ‘ಇಬ್ಬನಿ ತಬ್ಬಿದ ಇಳೆಯಲಿ’ ಮೂರು ವಿಭಿನ್ನ ಕಾಲಘಟ್ಟದಲ್ಲಿ ನಡೆಯುವ ಚಿತ್ರವಾಗಿದೆ. ವಿಹಾನ್ ಮತ್ತು ಅಂಕಿತಾ ಅಮರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ ಮತ್ತು ಶ್ರೀವತ್ಸನ್ ಸೆಲ್ವರಾಜನ್ ಅವರ ಛಾಯಾಗ್ರಹಣವಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>