<p><strong>ಬೆಂಗಳೂರು:</strong> ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೆಸುವ ಸಂಬಂಧ ಫೆ. 28ಕ್ಕೆ ಕಾರ್ಯಕಾರಿ ಸಮಿತಿಯ ಸಭೆ ನಿಗದಿಯಾಗಿದೆ.</p>.<p>ವಾಣಿಜ್ಯ ಮಂಡಳಿಗೆ ಶೀಘ್ರವೇ ಚುನಾವಣೆ ನಡೆಸಬೇಕು ಎಂಬ ಒತ್ತಾಯ ಸದಸ್ಯರ ವಲಯದಿಂದಲೇ ದೀರ್ಘ ಕಾಲದಿಂದ ಕೇಳಿಬಂದಿತ್ತು. ಕೋವಿಡ್, ಲೆಕ್ಕಪತ್ರಗಳ ನಿರ್ವಹಣೆ, ಕೆಲವು ಪ್ರಕರಣಗಳ ವಿಚಾರಣೆ ಸಂಬಂಧಿಸಿ ಹಲವಾರು ಕಾರಣಗಳಿಂದ ಚುನಾವಣೆ ಮುಂದಕ್ಕೆ ಹೋಗಿತ್ತು.</p>.<p>‘ಹೊಸ ಆಡಳಿತ ಮಂಡಳಿಯನ್ನು ರಚಿಸುವ ಸಂಬಂಧ ಮುಹೂರ್ತ ನಿಗದಿಗೆ ಈ ಸಭೆ ನಡೆಸಲಾಗುತ್ತಿದೆ. ಈಗಾಗಲೇ ಸದಸ್ಯರಿಗೆ ಸಭೆಯ ಸೂಚನೆಯನ್ನು ಕಾರ್ಯಕಾರಿ ಸಮಿತಿ ಸದಸ್ಯರಿಗೆ ಕಳುಹಿಸಲಾಗಿದೆ’ ಎಂದು ಮಂಡಳಿಯ ಗೌರವ ಕಾರ್ಯದರ್ಶಿ ಎನ್.ಎಂ. ಸುರೇಶ್ ಮಾಹಿತಿ ನೀಡಿದರು.</p>.<p>ಚುನಾವಣೆ ನಡೆಸದ ಬಗ್ಗೆ ಮಂಡಳಿಯ ಕೆಲವು ಸದಸ್ಯರು ಸಹಕಾರ ಸಂಘಗಳ ಉಪನಿಬಂಧಕರಿಗೆ ದೂರು ಸಲ್ಲಿಸಿದ್ದರು. ಆ ದೂರನ್ನು ಉಲ್ಲೇಖಿಸಿ ಸಂಘಗಳ ಜಿಲ್ಲಾ ನೋಂದಣಾಧಿಕಾರಿ ಎಸ್.ಜಿ. ಮಂಜುನಾಥ್ ಅವರು, ಕೂಡಲೇ ಚುನಾವಣಾ ಪ್ರಕ್ರಿಯೆ ಕೈಗೊಳ್ಳುವಂತೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳ ಸ್ಥಾನಕ್ಕೆ ಚುನಾವಣೆ ನಡೆಸುವ ಸಂಬಂಧ ಫೆ. 28ಕ್ಕೆ ಕಾರ್ಯಕಾರಿ ಸಮಿತಿಯ ಸಭೆ ನಿಗದಿಯಾಗಿದೆ.</p>.<p>ವಾಣಿಜ್ಯ ಮಂಡಳಿಗೆ ಶೀಘ್ರವೇ ಚುನಾವಣೆ ನಡೆಸಬೇಕು ಎಂಬ ಒತ್ತಾಯ ಸದಸ್ಯರ ವಲಯದಿಂದಲೇ ದೀರ್ಘ ಕಾಲದಿಂದ ಕೇಳಿಬಂದಿತ್ತು. ಕೋವಿಡ್, ಲೆಕ್ಕಪತ್ರಗಳ ನಿರ್ವಹಣೆ, ಕೆಲವು ಪ್ರಕರಣಗಳ ವಿಚಾರಣೆ ಸಂಬಂಧಿಸಿ ಹಲವಾರು ಕಾರಣಗಳಿಂದ ಚುನಾವಣೆ ಮುಂದಕ್ಕೆ ಹೋಗಿತ್ತು.</p>.<p>‘ಹೊಸ ಆಡಳಿತ ಮಂಡಳಿಯನ್ನು ರಚಿಸುವ ಸಂಬಂಧ ಮುಹೂರ್ತ ನಿಗದಿಗೆ ಈ ಸಭೆ ನಡೆಸಲಾಗುತ್ತಿದೆ. ಈಗಾಗಲೇ ಸದಸ್ಯರಿಗೆ ಸಭೆಯ ಸೂಚನೆಯನ್ನು ಕಾರ್ಯಕಾರಿ ಸಮಿತಿ ಸದಸ್ಯರಿಗೆ ಕಳುಹಿಸಲಾಗಿದೆ’ ಎಂದು ಮಂಡಳಿಯ ಗೌರವ ಕಾರ್ಯದರ್ಶಿ ಎನ್.ಎಂ. ಸುರೇಶ್ ಮಾಹಿತಿ ನೀಡಿದರು.</p>.<p>ಚುನಾವಣೆ ನಡೆಸದ ಬಗ್ಗೆ ಮಂಡಳಿಯ ಕೆಲವು ಸದಸ್ಯರು ಸಹಕಾರ ಸಂಘಗಳ ಉಪನಿಬಂಧಕರಿಗೆ ದೂರು ಸಲ್ಲಿಸಿದ್ದರು. ಆ ದೂರನ್ನು ಉಲ್ಲೇಖಿಸಿ ಸಂಘಗಳ ಜಿಲ್ಲಾ ನೋಂದಣಾಧಿಕಾರಿ ಎಸ್.ಜಿ. ಮಂಜುನಾಥ್ ಅವರು, ಕೂಡಲೇ ಚುನಾವಣಾ ಪ್ರಕ್ರಿಯೆ ಕೈಗೊಳ್ಳುವಂತೆ ಸೂಚಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>