ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಬಿಷ್ಣೋಯಿ ಗ್ಯಾಂಗ್ ಸದಸ್ಯ ಎನ್ನಲಾಗುತ್ತಿರುವ ಮಹಾಕಾಳ ಅಲಿಯಾಸ್ ಸಿದ್ದೇಶ್ ಅಲಿಯಾಸ್ ಸೌರಭ್ ಕಾಂಬ್ಳೆ(20) ವಿಚಾರಣೆ ವೇಳೆ ಬೆದರಿಕೆ ಪತ್ರ ರವಾನೆ ಕುರಿತಂತೆ ಮಾಹಿತಿ ನೀಡಿದ್ದಾನೆ.
ಮುಂಬೈನ ಅಪರಾಧ ವಿಭಾಗದ ಪೊಲೀಸರು ಸೋಮವಾರ ಕಾಂಬ್ಳೆಯನ್ನು ಪುಣೆಯಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ. ಇದರ ಬೆನ್ನಲ್ಲೇ, ಮೂಸೆವಾಲಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸಹ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಮಧ್ಯೆ, ಇದೇ ಪ್ರಕರಣದಲ್ಲಿ ಕಾಂಬ್ಳೆಯನ್ನು ಪ್ರಶ್ನಿಸಲು ಪಂಜಾಬ್ ಪೊಲೀಸರ ತಂಡವೂ ಪುಣೆಗೆ ಬಂದಿಳಿದಿದೆ.