ಈ ವೇಳೆ ಮಾತನಾಡಿದ ಸುಧಾಕರ್, ‘ಚಿತ್ರಮಂದಿರಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಪಡೆಯಲಾಗಿರುತ್ತದೆ. ಬುಕ್ಕಿಂಗ್ ಹಣ ವಾಪಸು ಕೊಡಲೂ ಆಗುವುದಿಲ್ಲ. ಹೀಗಾಗಿ, ಏ. 7ರವರೆಗೆ ಅವಕಾಶ ಕೊಡಿ ಎಂದು ಈ ಹಿಂದೆ ಚಿತ್ರ ನಿರ್ಮಾಪಕರು ಒತ್ತಾಯಿಸಿದ್ದರು. ಆ ನಂತರವೂ ಶೇ 100ರಷ್ಟು ಪ್ರೇಕ್ಷಕರಿಗೆ ಅವಕಾಶ ಮಾಡಿಕೊಡಬೇಕೆಂಬ ಬೇಡಿಕೆ ಬಗ್ಗೆ ಮುಖ್ಯಮಂತ್ರಿ ಜೊತೆ ಮಾತನಾಡಿ ತಿಳಿಸುತ್ತೇನೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆ ಪಡೆಯುತ್ತೇವೆ’ ಎಂದರು.