<p><strong>ಬೆಂಗಳೂರು:</strong> ಜಯನಗರ 5ನೇ ಹಂತದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಜಾಗವನ್ನೇ ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿ ನಿರ್ಮಾಣಕ್ಕೆ ನೀಡಲಾಗಿದ್ದು, ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಬಿಬಿಎಂಪಿಗೆ ಸೇರಿದ್ದ ಜಾಗದಲ್ಲಿ ಎರಡು ಅಂತಸ್ತಿನ ಗ್ರಂಥಾಲಯ ಕಟ್ಟಡವಿದೆ. ಮೊದಲ ಹಾಗೂ ಎರಡನೇ ಅಂತಸ್ತಿನ ಕೊಠಡಿಯಲ್ಲಿ ದಿನಪತ್ರಿಕೆ ಹಾಗೂ ಪುಸ್ತಕಗಳ ಓದಿಗೆ ಅವಕಾಶವಿದೆ. ನೆಲ ಮಹಡಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿನಿತ್ಯವೂ ಸಂಜೆ ಉಚಿತ ತರಬೇತಿ ಶಿಬಿರ ನಡೆಸಲಾಗುತ್ತದೆ.</p>.<p>ನೆಲಮಹಡಿ ಜಾಗವನ್ನೇ ಸಂಸದ ಕಚೇರಿಯನ್ನಾಗಿ ಪರಿವರ್ತಿಸಲಾಗುತ್ತಿದೆ. ಇದಕ್ಕೆ ಬಿಬಿಎಂಪಿ ಈಗಾಗಲೇ ಅನುಮತಿ ನೀಡಿದ್ದು, ನವೀಕರಣ ಕೆಲಸ ಆರಂಭವಾಗಿದೆ. ಇದರಿಂದಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ತರಬೇತಿ ಶಿಬಿರ ಸ್ಥಗಿತಗೊಳ್ಳಲಿದೆ.</p>.<p>‘ನಮ್ಮ ಸಂಸದರೇ ಗ್ರಂಥಾಲಯದ ಜಾಗವನ್ನು ಕಬಳಿಸುತ್ತಿದ್ದಾರೆ. ಇನ್ನು ಮುಂದೆ ನಮ್ಮ ಮಕ್ಕಳು ಯಾವ ಸ್ಥಳದಲ್ಲಿ ತರಬೇತಿ ಪಡೆಯಬೇಕು’ ಎಂದು ಪೋಷಕರು ಪ್ರಶ್ನಿಸುತ್ತಿದ್ದಾರೆ.</p>.<p>ಬಿಬಿಎಂಪಿ ಅಧಿಕಾರಿಯೊಬ್ಬರು, ‘ದಿವಂಗತ ಎನ್. ವಿಜಯ್ಕುಮಾರ್ ಅವರು ಶಾಸಕರಾಗಿದ್ದ ವೇಳೆ ಜಯನಗರ ಶೈಕ್ಷಣಿಕ ಸಮಿತಿಗೆ ಈ ಹಿಂದೆ ಜಾಗವನ್ನು ನೀಡಲಾಗಿತ್ತು. ಒಪ್ಪಂದದ ಅವಧಿ 2019ರ ಮಾರ್ಚ್ನಲ್ಲೇ ಮುಗಿದಿದೆ. ಈಗ ಬೇರೊಂದು ಟ್ರಸ್ಟ್ಗೆ ಬಿಬಿಎಂಪಿ ಕೌನ್ಸಿಲ್ ಸಭೆಯೇ ಜಾಗ ಮಂಜೂರು ಮಾಡಿದೆ’ ಎಂದು ಮಾಹಿತಿ ನೀಡಿದರು.</p>.<p>ಆರ್ಟಿಐ ಹೋರಾಟಗಾರ ಮರಿಲಿಂಗೇಗೌಡ ಮಾಲಿ ಪಾಟೀಲ, ‘ವಿದ್ಯಾರ್ಥಿಗಳಿಗೆ ಆಗುವ ತೊಂದರೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಯನಗರ 5ನೇ ಹಂತದಲ್ಲಿರುವ ಸಾರ್ವಜನಿಕ ಗ್ರಂಥಾಲಯ ಜಾಗವನ್ನೇ ಸಂಸದ ತೇಜಸ್ವಿ ಸೂರ್ಯ ಅವರ ಕಚೇರಿ ನಿರ್ಮಾಣಕ್ಕೆ ನೀಡಲಾಗಿದ್ದು, ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಗೂ ಪೋಷಕರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಬಿಬಿಎಂಪಿಗೆ ಸೇರಿದ್ದ ಜಾಗದಲ್ಲಿ ಎರಡು ಅಂತಸ್ತಿನ ಗ್ರಂಥಾಲಯ ಕಟ್ಟಡವಿದೆ. ಮೊದಲ ಹಾಗೂ ಎರಡನೇ ಅಂತಸ್ತಿನ ಕೊಠಡಿಯಲ್ಲಿ ದಿನಪತ್ರಿಕೆ ಹಾಗೂ ಪುಸ್ತಕಗಳ ಓದಿಗೆ ಅವಕಾಶವಿದೆ. ನೆಲ ಮಹಡಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿನಿತ್ಯವೂ ಸಂಜೆ ಉಚಿತ ತರಬೇತಿ ಶಿಬಿರ ನಡೆಸಲಾಗುತ್ತದೆ.</p>.<p>ನೆಲಮಹಡಿ ಜಾಗವನ್ನೇ ಸಂಸದ ಕಚೇರಿಯನ್ನಾಗಿ ಪರಿವರ್ತಿಸಲಾಗುತ್ತಿದೆ. ಇದಕ್ಕೆ ಬಿಬಿಎಂಪಿ ಈಗಾಗಲೇ ಅನುಮತಿ ನೀಡಿದ್ದು, ನವೀಕರಣ ಕೆಲಸ ಆರಂಭವಾಗಿದೆ. ಇದರಿಂದಾಗಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ತರಬೇತಿ ಶಿಬಿರ ಸ್ಥಗಿತಗೊಳ್ಳಲಿದೆ.</p>.<p>‘ನಮ್ಮ ಸಂಸದರೇ ಗ್ರಂಥಾಲಯದ ಜಾಗವನ್ನು ಕಬಳಿಸುತ್ತಿದ್ದಾರೆ. ಇನ್ನು ಮುಂದೆ ನಮ್ಮ ಮಕ್ಕಳು ಯಾವ ಸ್ಥಳದಲ್ಲಿ ತರಬೇತಿ ಪಡೆಯಬೇಕು’ ಎಂದು ಪೋಷಕರು ಪ್ರಶ್ನಿಸುತ್ತಿದ್ದಾರೆ.</p>.<p>ಬಿಬಿಎಂಪಿ ಅಧಿಕಾರಿಯೊಬ್ಬರು, ‘ದಿವಂಗತ ಎನ್. ವಿಜಯ್ಕುಮಾರ್ ಅವರು ಶಾಸಕರಾಗಿದ್ದ ವೇಳೆ ಜಯನಗರ ಶೈಕ್ಷಣಿಕ ಸಮಿತಿಗೆ ಈ ಹಿಂದೆ ಜಾಗವನ್ನು ನೀಡಲಾಗಿತ್ತು. ಒಪ್ಪಂದದ ಅವಧಿ 2019ರ ಮಾರ್ಚ್ನಲ್ಲೇ ಮುಗಿದಿದೆ. ಈಗ ಬೇರೊಂದು ಟ್ರಸ್ಟ್ಗೆ ಬಿಬಿಎಂಪಿ ಕೌನ್ಸಿಲ್ ಸಭೆಯೇ ಜಾಗ ಮಂಜೂರು ಮಾಡಿದೆ’ ಎಂದು ಮಾಹಿತಿ ನೀಡಿದರು.</p>.<p>ಆರ್ಟಿಐ ಹೋರಾಟಗಾರ ಮರಿಲಿಂಗೇಗೌಡ ಮಾಲಿ ಪಾಟೀಲ, ‘ವಿದ್ಯಾರ್ಥಿಗಳಿಗೆ ಆಗುವ ತೊಂದರೆ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>