ಹೈದರಾಬಾದ್ನಲ್ಲಿ ಜ. 15ರಂದು (ಶುಕ್ರವಾರ) ಬೆಳಿಗ್ಗೆ 11 ಗಂಟೆಗೆ ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಲಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಗಣ್ಯರ ದಂಡೇ ಸೇರುವ ನಿರೀಕ್ಷೆ ಇದೆ. ರಾಜ್ಯದ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ್, ‘ರಾಕಿಂಗ್ ಸ್ಟಾರ್’ ಯಶ್, ಟಾಲಿವುಡ್ನ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿಹಾಗೂ ವಿಜಯ್ ಕಿರಗಂದೂರು ಭಾಗವಹಿಸಲಿದ್ದಾರೆ.