‘ನಾಲ್ಕು ವರ್ಷ ಸಾಧುಗಳ ಸಂಗ ಮಾಡಿ ಅಧ್ಯಾತ್ಮ, ವೈರಾಗ್ಯದ ಮೊರೆ ಹೋಗಿದ್ದೆ. ಆ ವೇಳೆಯಲ್ಲಿ ಮುಖವಾಡ ಇಲ್ಲದವನು ಎಂಬ ಪುಸ್ತಕವನ್ನೂ ಬರೆದಿದ್ದೆ. ಸಾಧು ಸಂತರಿಂದ ಕಲಿತದ್ದನ್ನೇ ಇದೀಗ ಸಿನಿಮಾ ಮಾಡಿದ್ದೇನೆ. ಸುವರ್ಣಮುಖಿ, ಬನ್ನೇರುಘಟ್ಟ, ಚಿಕ್ಕಮಗಳೂರು, ಬೆಳಗಾವಿ, ಅಂಬೂಲಿ ಸೇರಿ ಹಲವೆಡೆ ಚಿತ್ರೀಕರಣ ಮಾಡಿದ್ದೇವೆ’ ಎಂದು ಸಿನಿಮಾ ಕುರಿತ ಮಾತನಾಡಿದ್ದಾರೆ ನಿರ್ದಶಕ ಶಿವಕುಮಾರ್.