<p>ಶೀರ್ಷಿಕೆ ಮೂಲಕವೇ ಕುತೂಹಲ ಹುಟ್ಟಿಸಿರುವ ‘ಮುಖವಾಡ ಇಲ್ಲದವನು 84’ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನ ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೊದಲ್ಲಿ ನೆರವೇರಿತು. ಓಂ ನಮಃ ಶಿವಾಯ ಮೂವೀಸ್ ಲಾಂಛನದಲ್ಲಿ ಗಣಪತಿ ಪಾಟೀಲ್ ಬೆಳಗಾವಿ ನಿರ್ಮಾಣದ ಈ ಚಿತ್ರವು ಹೊಸಬರ ಪ್ರಯತ್ನವಾಗಿದೆ. ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ರವಿ ಶ್ರೀವತ್ಸ ಹಾಗೂ ವೇಣುಗೋಪಾಲ್ ಅತಿಥಿಗಳಾಗಿದ್ದರು.</p>.<p>ನ್ಯೂಜಿಲೆಂಡ್ನಲ್ಲಿ ಉದ್ಯೋಗಿಯಾಗಿರುವ ಗಣಪತಿ ಪಾಟೀಲ್ ಬಹಳ ವರ್ಷಗಳಿಂದ ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಹಂಬಲ ಹೊಂದಿದ್ದವರು. ಚಿತ್ರದ ಬಹುತೇಕ ಎಲ್ಲಾ ಕೆಲಸಗಳು ಪೂರ್ಣಗೊಂಡಿದ್ದು ಬಿಡುಗಡೆಯ ಸಿದ್ಧತೆ ಮಾಡಿಕೊಳ್ಳುತ್ತಿದೆ ತಂಡ.</p>.<p>ಶಿವಕುಮಾರ್ ಕಡೂರು ನಿರ್ದೇಶನದ ಜೊತೆಗೆ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಈ ಮೊದಲು ‘ಡ್ರೆಸ್ ಕೋಡ್’ ಚಿತ್ರ ಮಾಡಿದ ಅನುಭವ ಇವರಿಗಿದೆ.</p>.<p>‘ನಾಲ್ಕು ವರ್ಷ ಸಾಧುಗಳ ಸಂಗ ಮಾಡಿ ಅಧ್ಯಾತ್ಮ, ವೈರಾಗ್ಯದ ಮೊರೆ ಹೋಗಿದ್ದೆ. ಆ ವೇಳೆಯಲ್ಲಿ ಮುಖವಾಡ ಇಲ್ಲದವನು ಎಂಬ ಪುಸ್ತಕವನ್ನೂ ಬರೆದಿದ್ದೆ. ಸಾಧು ಸಂತರಿಂದ ಕಲಿತದ್ದನ್ನೇ ಇದೀಗ ಸಿನಿಮಾ ಮಾಡಿದ್ದೇನೆ. ಸುವರ್ಣಮುಖಿ, ಬನ್ನೇರುಘಟ್ಟ, ಚಿಕ್ಕಮಗಳೂರು, ಬೆಳಗಾವಿ, ಅಂಬೂಲಿ ಸೇರಿ ಹಲವೆಡೆ ಚಿತ್ರೀಕರಣ ಮಾಡಿದ್ದೇವೆ’ ಎಂದು ಸಿನಿಮಾ ಕುರಿತ ಮಾತನಾಡಿದ್ದಾರೆ ನಿರ್ದಶಕ ಶಿವಕುಮಾರ್.</p>.<p>ಕಾವ್ಯಾ ಗೌಡ, ರಚನಾ, ಸೊನಾಲಿ ರಾಯ್ ಮತ್ತು ಹರೀಶ್ ಸಾರಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ದುರ್ಗಾ ಪ್ರಸಾದ್ ಅವರ ಸಂಗೀತ ಹಾಗೂ ಡಾ. ಮಹಾರಾಜಾ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಸೆನ್ಸಾರ್ ಮಂಡಳಿಯಿಂದ ಯುಎ ಪ್ರಮಾಣಪತ್ರ ಪಡೆದುಕೊಂಡಿರುವ ಸಿನಿಮಾವನ್ನು ಡಿಸೆಂಬರ್ ವೇಳೆಗೆ ಬಿಡುಗಡೆ ಮಾಡುವ ಉದ್ದೇಶ ಚಿತ್ರತಂಡದ್ದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶೀರ್ಷಿಕೆ ಮೂಲಕವೇ ಕುತೂಹಲ ಹುಟ್ಟಿಸಿರುವ ‘ಮುಖವಾಡ ಇಲ್ಲದವನು 84’ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನ ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೊದಲ್ಲಿ ನೆರವೇರಿತು. ಓಂ ನಮಃ ಶಿವಾಯ ಮೂವೀಸ್ ಲಾಂಛನದಲ್ಲಿ ಗಣಪತಿ ಪಾಟೀಲ್ ಬೆಳಗಾವಿ ನಿರ್ಮಾಣದ ಈ ಚಿತ್ರವು ಹೊಸಬರ ಪ್ರಯತ್ನವಾಗಿದೆ. ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ರವಿ ಶ್ರೀವತ್ಸ ಹಾಗೂ ವೇಣುಗೋಪಾಲ್ ಅತಿಥಿಗಳಾಗಿದ್ದರು.</p>.<p>ನ್ಯೂಜಿಲೆಂಡ್ನಲ್ಲಿ ಉದ್ಯೋಗಿಯಾಗಿರುವ ಗಣಪತಿ ಪಾಟೀಲ್ ಬಹಳ ವರ್ಷಗಳಿಂದ ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಹಂಬಲ ಹೊಂದಿದ್ದವರು. ಚಿತ್ರದ ಬಹುತೇಕ ಎಲ್ಲಾ ಕೆಲಸಗಳು ಪೂರ್ಣಗೊಂಡಿದ್ದು ಬಿಡುಗಡೆಯ ಸಿದ್ಧತೆ ಮಾಡಿಕೊಳ್ಳುತ್ತಿದೆ ತಂಡ.</p>.<p>ಶಿವಕುಮಾರ್ ಕಡೂರು ನಿರ್ದೇಶನದ ಜೊತೆಗೆ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ಈ ಮೊದಲು ‘ಡ್ರೆಸ್ ಕೋಡ್’ ಚಿತ್ರ ಮಾಡಿದ ಅನುಭವ ಇವರಿಗಿದೆ.</p>.<p>‘ನಾಲ್ಕು ವರ್ಷ ಸಾಧುಗಳ ಸಂಗ ಮಾಡಿ ಅಧ್ಯಾತ್ಮ, ವೈರಾಗ್ಯದ ಮೊರೆ ಹೋಗಿದ್ದೆ. ಆ ವೇಳೆಯಲ್ಲಿ ಮುಖವಾಡ ಇಲ್ಲದವನು ಎಂಬ ಪುಸ್ತಕವನ್ನೂ ಬರೆದಿದ್ದೆ. ಸಾಧು ಸಂತರಿಂದ ಕಲಿತದ್ದನ್ನೇ ಇದೀಗ ಸಿನಿಮಾ ಮಾಡಿದ್ದೇನೆ. ಸುವರ್ಣಮುಖಿ, ಬನ್ನೇರುಘಟ್ಟ, ಚಿಕ್ಕಮಗಳೂರು, ಬೆಳಗಾವಿ, ಅಂಬೂಲಿ ಸೇರಿ ಹಲವೆಡೆ ಚಿತ್ರೀಕರಣ ಮಾಡಿದ್ದೇವೆ’ ಎಂದು ಸಿನಿಮಾ ಕುರಿತ ಮಾತನಾಡಿದ್ದಾರೆ ನಿರ್ದಶಕ ಶಿವಕುಮಾರ್.</p>.<p>ಕಾವ್ಯಾ ಗೌಡ, ರಚನಾ, ಸೊನಾಲಿ ರಾಯ್ ಮತ್ತು ಹರೀಶ್ ಸಾರಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ದುರ್ಗಾ ಪ್ರಸಾದ್ ಅವರ ಸಂಗೀತ ಹಾಗೂ ಡಾ. ಮಹಾರಾಜಾ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಸೆನ್ಸಾರ್ ಮಂಡಳಿಯಿಂದ ಯುಎ ಪ್ರಮಾಣಪತ್ರ ಪಡೆದುಕೊಂಡಿರುವ ಸಿನಿಮಾವನ್ನು ಡಿಸೆಂಬರ್ ವೇಳೆಗೆ ಬಿಡುಗಡೆ ಮಾಡುವ ಉದ್ದೇಶ ಚಿತ್ರತಂಡದ್ದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>