<p><strong>ಮುಂಬೈ</strong>: ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಎನ್ಸಿಬಿ ಯತ್ನಿಸುತ್ತಿದೆ ಎಂದು ಆರ್ಯನ್ ಖಾನ್ ತಿಳಿಸಿದ್ದಾರೆ.</p>.<p>ಜಾಮೀನು ಕೋರಿ ಬಾಂಬೆ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿಕೆಗಳನ್ನು ದಾಖಲಿಸಿರುವ ಆರ್ಯನ್ ಖಾನ್, 'ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಎನ್ಸಿಬಿ ಯತ್ನಿಸುತ್ತಿದೆ. ಇದು ನ್ಯಾಯಸಮ್ಮತವಲ್ಲದ ಪ್ರಕ್ರಿಯೆ' ಎಂದು ದೂರಿದ್ದಾರೆ.</p>.<p>'ನನ್ನ ವಾಟ್ಸ್ಆ್ಯಪ್ ಸಂದೇಶಗಳ ವ್ಯಾಖ್ಯಾನವನ್ನು ತನಿಖಾಧಿಕಾರಿಯೊಬ್ಬರು ಮಾಡಿದ್ದಾರೆ. ಅಂತಹ ವ್ಯಾಖ್ಯಾನವೇ ತಪ್ಪು ಮತ್ತು ನ್ಯಾಯಸಮ್ಮತವಲ್ಲದ್ದು' ಎಂದು ಆರ್ಯನ್ ಖಾನ್ ಮನವಿಯಲ್ಲಿ ತಿಳಿಸಿದ್ದಾರೆ.</p>.<p>ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26ರಂದು ನಡೆಸುವುದಾಗಿ ಬಾಂಬೆ ಹೈಕೋರ್ಟ್ ತಿಳಿಸಿದೆ.</p>.<p>ಆರ್ಯನ್ ಖಾನ್ ಪರ ವಕೀಲ ಸತೀಶ್ ಮಾನಶಿಂಧೆ ಅವರು ತುರ್ತು ವಿಚಾರಣೆಗೆ ಕೋರಿ ನ್ಯಾಯಮೂರ್ತಿ ಎನ್. ಡಬ್ಲ್ಯು.ಸಾಂಬ್ರೆ ಅವರ ಏಕ ಸದಸ್ಯ ಪೀಠದ ಎದುರು ಅರ್ಜಿ ಸಲ್ಲಿಸಿದ್ದರು.</p>.<p>ಪ್ರಕರಣದ ಆರೋಪಿಗಳಾದ ಆರ್ಯನ್ ಖಾನ್ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಮತ್ತು ಮಾಡೆಲ್ ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಯನ್ನು ಕೆಳ ನ್ಯಾಯಾಲಯ ತಿರಸ್ಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಎನ್ಸಿಬಿ ಯತ್ನಿಸುತ್ತಿದೆ ಎಂದು ಆರ್ಯನ್ ಖಾನ್ ತಿಳಿಸಿದ್ದಾರೆ.</p>.<p>ಜಾಮೀನು ಕೋರಿ ಬಾಂಬೆ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿಕೆಗಳನ್ನು ದಾಖಲಿಸಿರುವ ಆರ್ಯನ್ ಖಾನ್, 'ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಎನ್ಸಿಬಿ ಯತ್ನಿಸುತ್ತಿದೆ. ಇದು ನ್ಯಾಯಸಮ್ಮತವಲ್ಲದ ಪ್ರಕ್ರಿಯೆ' ಎಂದು ದೂರಿದ್ದಾರೆ.</p>.<p>'ನನ್ನ ವಾಟ್ಸ್ಆ್ಯಪ್ ಸಂದೇಶಗಳ ವ್ಯಾಖ್ಯಾನವನ್ನು ತನಿಖಾಧಿಕಾರಿಯೊಬ್ಬರು ಮಾಡಿದ್ದಾರೆ. ಅಂತಹ ವ್ಯಾಖ್ಯಾನವೇ ತಪ್ಪು ಮತ್ತು ನ್ಯಾಯಸಮ್ಮತವಲ್ಲದ್ದು' ಎಂದು ಆರ್ಯನ್ ಖಾನ್ ಮನವಿಯಲ್ಲಿ ತಿಳಿಸಿದ್ದಾರೆ.</p>.<p>ಆರ್ಯನ್ ಖಾನ್ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 26ರಂದು ನಡೆಸುವುದಾಗಿ ಬಾಂಬೆ ಹೈಕೋರ್ಟ್ ತಿಳಿಸಿದೆ.</p>.<p>ಆರ್ಯನ್ ಖಾನ್ ಪರ ವಕೀಲ ಸತೀಶ್ ಮಾನಶಿಂಧೆ ಅವರು ತುರ್ತು ವಿಚಾರಣೆಗೆ ಕೋರಿ ನ್ಯಾಯಮೂರ್ತಿ ಎನ್. ಡಬ್ಲ್ಯು.ಸಾಂಬ್ರೆ ಅವರ ಏಕ ಸದಸ್ಯ ಪೀಠದ ಎದುರು ಅರ್ಜಿ ಸಲ್ಲಿಸಿದ್ದರು.</p>.<p>ಪ್ರಕರಣದ ಆರೋಪಿಗಳಾದ ಆರ್ಯನ್ ಖಾನ್ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಮತ್ತು ಮಾಡೆಲ್ ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಯನ್ನು ಕೆಳ ನ್ಯಾಯಾಲಯ ತಿರಸ್ಕರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>