ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ ದರ್ಶನ್‌ ಅಭಿನಯದ 'ಕುರುಕ್ಷೇತ್ರ' ಆ.9ರಂದು ಕನ್ನಡ, ತೆಲುಗಿನಲ್ಲಿ ತೆರೆಗೆ

Last Updated 3 ಆಗಸ್ಟ್ 2019, 15:47 IST
ಅಕ್ಷರ ಗಾತ್ರ

ಬೆಂಗಳೂರು:ನಟ ದರ್ಶನ್ ಅಭಿನಯದ 50ನೇ ಸಿನಿಮಾ 'ಮುನಿರತ್ನ ಕುರುಕ್ಷೇತ್ರ' ಆಗಸ್ಟ್ 9ರಂದು ಕನ್ನಡ ಮತ್ತು ತೆಲುಗಿನಲ್ಲಿ ಮಾತ್ರ ಬಿಡುಗಡೆಯಾಗುತ್ತಿದೆ.

ಆಗಸ್ಟ್ 15ರಂದು ತಮಿಳು ಮತ್ತು ಮಲಯಾಳಂದ ಅವತರಣಿಕೆ ತೆರೆ ಕಾಣಲಿದೆ. ಪ್ರಸ್ತುತ ಮುಂಬೈನಲ್ಲಿ ಮಳೆ ಆರ್ಭಟಿಸುತ್ತಿದೆ. ಹಾಗಾಗಿ, ಮೂರು ವಾರಗಳ ಬಳಿಕ ಹಿಂದಿ ಅವತರಣಿಕೆಯ ಬಿಡುಗಡೆಗೆ ನಿರ್ಧರಿಸಲಾಗಿದೆ. ಕನ್ನಡ ಸೇರಿದಂತೆ ಐದು ಭಾಷೆಯ ಒಟ್ಟು 3 ಸಾವಿರ ಚಿತ್ರಮಂದಿರದಲ್ಲಿ ಈ ಚಿತ್ರ ತೆರೆ ಕಾಣಲಿದೆ.

ಶನಿವಾರದ ರಾತ್ರಿಯಿಂದಲೇ ಆನ್‌ಲೈನ್‌ನಲ್ಲಿ ಟಿಕೆಟ್ ಮಾರಾಟ ಆರಂಭವಾಗಲಿದೆ‌.‌ 'ಎರಡು ವರ್ಷದ ಶ್ರಮ ತೆರೆಯ ಮೇಲೆ ಬರುತ್ತಿರುವುದಕ್ಕೆ ಖುಷಿಯಾಗುತ್ತಿದೆ‌. ಚಿತ್ರ ಬಿಡುಗಡೆ ಸಂಬಂಧ ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯಲ್ಲಿ ಸಿನಿಮಾ ಬಿಡುಗಡೆಗೆ ವಿತರಕರಿಂದ ಸಾಕಷ್ಟು ಬೇಡಿಕೆ ಬಂದಿದೆ' ಎಂದು ಚಿತ್ರದ ವಿತರಕ ರಾಕ್ ಲೈನ್ ವೆಂಕಟೇಶ್ ತಿಳಿಸಿದರು.

ನಟ ದರ್ಶನ್ ಮಾತನಾಡಿ, 2D ಮತ್ತು 3D ರೂಪದಲ್ಲಿ ಸಿನಿಮಾ ಬರುತ್ತಿದೆ. ಎಪ್ಪತ್ತರ ದಶಕದಿಂದ ಇಲ್ಲಿಯವರೆಗೆ ಚಿತ್ರರಂಗದಲ್ಲಿ ಇರುವ ಎಲ್ಲಾ ಕಲಾವಿದರು ಕುರುಕ್ಷೇತ್ರ ಸಿನಿಮಾದಲ್ಲಿದ್ದಾರೆ. ಎಲ್ಲರ ಅಭಿನಯವೂ ಮನೋಜ್ಞವಾಗಿದೆ ಎಂದರು.

ಪೌರಾಣಿಕ ಸಿನಿಮಾಗಳನ್ನು ಮಾಡಲು ನಿರ್ಮಾಪಕರಿಗೆ ಎದೆಗಾರಿಕೆ ಬೇಕು. ಚಿತ್ರದ ನಿರ್ಮಾಪಕ ಮುನಿರತ್ನ ಅವರೇ ಈ ಚಿತ್ರದ ನಿಜವಾದ ಹೀರೊ. ನಿರ್ದೇಶಕ ನಾಗಣ್ಣ ಅವರ ಪರಿಶ್ರಮವೂ ದೊಡ್ಡದು ಎಂದು ಹೊಗಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT