<p><strong>ಚೆನ್ನೈ:</strong> ನಿರ್ಜಲೀಕರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆಸ್ಕರ್ ಪ್ರಶಸ್ತಿ ವಿಜೇತ, ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಆರೋಗ್ಯವಂತರಾಗಿದ್ದು, ಮನೆಗೆ ಮರಳಿದ್ದಾರೆ ಎಂದು ಕುಟುಂಬದವರು ಇಂದು (ಭಾನುವಾರ) ತಿಳಿಸಿದ್ದಾರೆ. </p><p>'ಎರಡು ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ 58 ವರ್ಷದ ರೆಹಮಾನ್ ಅವರನ್ನು ಭಾನುವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಯಿತು' ಎಂದು ಅವರ ವ್ಯವಸ್ಥಾಪಕ ಸೆಂಥಿಲ್ ವೇಲನ್ ತಿಳಿಸಿದ್ದಾರೆ. </p><p>'ರೆಹಮಾನ್ ಸಂಪೂರ್ಣವಾಗಿ ಆರೋಗ್ಯವಂತರಾಗಿದ್ದು, ಮನೆಗೆ ಮರಳಿದ್ದಾರೆ. ವೈದ್ಯರು ಕೆಲವು ಪರೀಕ್ಷೆಗಳನ್ನು ನಡೆಸಿದ್ದಾರೆ. ಎಲ್ಲವೂ ಸಹಜವಾಗಿತ್ತು' ಎಂದು ಅವರು ಹೇಳಿದ್ದಾರೆ. </p><p>ಎದೆ ನೋವು ಕಾಣಿಸಿಕೊಂಡಿದ್ದರಿಂದ ರೆಹಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿಗಳನ್ನು ನಿರಾಕರಿಸಿರುವ ಸಹೋದರಿ ಎ.ಆರ್. ರೆಹಾನಾ, 'ಅವರಿಗೆ ನಿರ್ಜಲೀಕರಣ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಇತ್ತು' ಎಂದು ಹೇಳಿದ್ದಾರೆ. </p><p>ರೆಹಮಾನ್ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ ಅಪೊಲೊ ಆಸ್ಪತ್ರೆಯ ಮೆಡಿಕಲ್ ಬುಲೆಟಿನ್ ಅನ್ನು ರೆಹಮಾನ್ ಅವರ ಪುತ್ರ ಎ.ಆರ್. ಅಮೀನ್, ತಮ್ಮ ಇನ್ಸ್ಟಾಗ್ರಾಂ ಸ್ಟೋರಿಸ್ನಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು, ಹಿತೈಷಿಗಳ ಪ್ರೀತಿ, ಪ್ರಾರ್ಥನೆಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ. </p><p>ರೆಹಮಾನ್ ಆರೋಗ್ಯ ಸಂಬಂಧ ಅಪೊಲೊ ಆಸ್ಪತ್ರೆಯ ವೈದ್ಯರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡಿರುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ. </p>.ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಆಸ್ಪತ್ರೆಗೆ ದಾಖಲು.ರೆಹಮಾನ್ ಒಳ್ಳೆಯ ವ್ಯಕ್ತಿ, ಅನಾರೋಗ್ಯದಿಂದ ವಿರಾಮ ತೆಗೆದುಕೊಂಡಿದ್ದೇನೆ: ಸಾಯಿರಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ನಿರ್ಜಲೀಕರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಆಸ್ಕರ್ ಪ್ರಶಸ್ತಿ ವಿಜೇತ, ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಆರೋಗ್ಯವಂತರಾಗಿದ್ದು, ಮನೆಗೆ ಮರಳಿದ್ದಾರೆ ಎಂದು ಕುಟುಂಬದವರು ಇಂದು (ಭಾನುವಾರ) ತಿಳಿಸಿದ್ದಾರೆ. </p><p>'ಎರಡು ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ 58 ವರ್ಷದ ರೆಹಮಾನ್ ಅವರನ್ನು ಭಾನುವಾರ ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಯಿತು' ಎಂದು ಅವರ ವ್ಯವಸ್ಥಾಪಕ ಸೆಂಥಿಲ್ ವೇಲನ್ ತಿಳಿಸಿದ್ದಾರೆ. </p><p>'ರೆಹಮಾನ್ ಸಂಪೂರ್ಣವಾಗಿ ಆರೋಗ್ಯವಂತರಾಗಿದ್ದು, ಮನೆಗೆ ಮರಳಿದ್ದಾರೆ. ವೈದ್ಯರು ಕೆಲವು ಪರೀಕ್ಷೆಗಳನ್ನು ನಡೆಸಿದ್ದಾರೆ. ಎಲ್ಲವೂ ಸಹಜವಾಗಿತ್ತು' ಎಂದು ಅವರು ಹೇಳಿದ್ದಾರೆ. </p><p>ಎದೆ ನೋವು ಕಾಣಿಸಿಕೊಂಡಿದ್ದರಿಂದ ರೆಹಮಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿಗಳನ್ನು ನಿರಾಕರಿಸಿರುವ ಸಹೋದರಿ ಎ.ಆರ್. ರೆಹಾನಾ, 'ಅವರಿಗೆ ನಿರ್ಜಲೀಕರಣ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಇತ್ತು' ಎಂದು ಹೇಳಿದ್ದಾರೆ. </p><p>ರೆಹಮಾನ್ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ ಅಪೊಲೊ ಆಸ್ಪತ್ರೆಯ ಮೆಡಿಕಲ್ ಬುಲೆಟಿನ್ ಅನ್ನು ರೆಹಮಾನ್ ಅವರ ಪುತ್ರ ಎ.ಆರ್. ಅಮೀನ್, ತಮ್ಮ ಇನ್ಸ್ಟಾಗ್ರಾಂ ಸ್ಟೋರಿಸ್ನಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು, ಹಿತೈಷಿಗಳ ಪ್ರೀತಿ, ಪ್ರಾರ್ಥನೆಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ. </p><p>ರೆಹಮಾನ್ ಆರೋಗ್ಯ ಸಂಬಂಧ ಅಪೊಲೊ ಆಸ್ಪತ್ರೆಯ ವೈದ್ಯರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡಿರುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ. </p>.ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಆಸ್ಪತ್ರೆಗೆ ದಾಖಲು.ರೆಹಮಾನ್ ಒಳ್ಳೆಯ ವ್ಯಕ್ತಿ, ಅನಾರೋಗ್ಯದಿಂದ ವಿರಾಮ ತೆಗೆದುಕೊಂಡಿದ್ದೇನೆ: ಸಾಯಿರಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>