ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಜಾವರ ಸ್ವಾಮೀಜಿ ಕುರಿತ ಹೇಳಿಕೆ: ಕ್ಷಮೆಯಾಚಿಸಿದ ಹಂಸಲೇಖ

Last Updated 15 ನವೆಂಬರ್ 2021, 8:33 IST
ಅಕ್ಷರ ಗಾತ್ರ

ಬೆಂಗಳೂರು: ಪೇಜಾವರ ಸ್ವಾಮೀಜಿ ಮತ್ತು ಮಾಂಸಾಹಾರ ಸೇವನೆ ಕುರಿತಂತೆ ಹೇಳಿಕೆ ನೀಡಿ ಜನರ ಆಕ್ರೋಶಕ್ಕೆ ಗುರಿಯಾಗಿದ್ದ ಸಂಗೀತ ನಿರ್ದೇಶಕ ಹಂಸಲೇಖ, ಫೇಸ್‌ಬುಕ್ ವಿಡಿಯೊ ಮೂಲಕ ಕ್ಷಮೆಯಾಚಿಸಿದ್ದಾರೆ.

ಮೈಸೂರಿನಲ್ಲಿ ನಡೆದಿದ್ದ ಪ್ರಶಸ್ತಿ ಪುರಸ್ಕಾರದ ಸಭೆಯಲ್ಲಿ ಹಂಸಲೇಖ ಅವರು, ದಲಿತರ ಮನೆಯಲ್ಲಿ ಪೇಜಾವರ ಶ್ರೀಗಳು ಕೋಳಿ ತಿನ್ನುತ್ತಾರಾ? ಲಿವರ್ ಕೊಟ್ಟರೆ ತಿನ್ನುತ್ತಾರಾ ಎಂದು ಕೇಳಿದ್ದರು. ಅಲ್ಲದೆ, ಕುಮಾರಸ್ವಾಮಿ ಅವರ ಗ್ರಾಮ ವಾಸ್ತವ್ಯ ಕುರಿತು ಕೂಡ ಪ್ರಸ್ತಾಪಿಸಿದ್ದರು.

ದಲಿತರ ಬಗೆಗಿನ ಅಸ್ಪೃಶ್ಯತೆ ಮತ್ತು ಆಹಾರ ಪದ್ಧತಿ ಬಗೆಗಿನ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಲೇ ಹಂಸಲೇಖ ಅವರು ವಿಡಿಯೊ ಮೂಲಕ ಜನತೆಯ ಕ್ಷಮೆಕೋರಿದ್ದಾರೆ.

ಮೊದಲಿಗೆ ಕ್ಷಮೆ ಇರಲಿ, ಎರಡನೆಯದಾಗಿಯೂ ಕ್ಷಮೆ ಇರಲಿ ಎಂದು ಮಾತು ಆರಂಭಿಸಿದ ಹಂಸಲೇಖ, ನನ್ನ ಮಾತು ಪತ್ನಿಗೇ ಹಿಡಿಸಲಿಲ್ಲ, ಆಕೆಯ ಬಳಿಯೂ ಕ್ಷಮೆ ಕೋರಿದ್ದೇನೆ ಎಂದು ಹೇಳಿದ್ದಾರೆ.

ಹಂಸಲೇಖ ಅವರ ಹೇಳಿಕೆ ವಿಡಿಯೊಟ್ರೋಲ್‌ಗೂ ಗುರಿಯಾಗಿದ್ದು, ಸಾಮಾಜಿಕ ತಾಣದಲ್ಲೂ ಜನರಿಂದ ಪ್ರತಿಭಟನೆ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT