<p>ಉಸಿರಾಟದ ಸಮಸ್ಯೆಯಿಂದ ಶನಿವಾರ ಕಲಬುರ್ಗಿಯಲ್ಲಿ ನಿಧನರಾದ ಪ್ರಸಿದ್ಧ ಸಂಗೀತ ನಿರ್ದೇಶಕ ಇಸ್ಮಾಯಿಲ್ ಗೋನಾಳ್ (75) ಅವರ ಪಾರ್ಥಿವ ಶರೀರವನ್ನು ಬಳ್ಳಾರಿಗೆ ತರಲಾಗಿದೆ.</p>.<p>ಪಾರ್ಥಿವ ಶರೀರದ ಮುಂದೆ ಕಲಾವಿದರು ರಂಗಗೀತೆಗಳನ್ನು ಹಾಡಿ ಶ್ರದ್ಧಾಂಜಲಿ ಸಲ್ಲಿಸಿದರು. ರಂಗಕರ್ಮಿ ಸಿ. ಬಸವಲಿಂಗಯ್ಯ, ಲೇಖಕ ಡಾ. ರಾಜಪ್ಪ ದಳವಾಯಿ, ಡಿ.ಆರ್. ರಾಜಪ್ಪ, ರಂಗತೋರಣ ಸಂಸ್ಥೆಯ ಕಪ್ಪಗಲ್ಲು ಪ್ರಭುದೇವ, ಅಡವೀಸ್ವಾಮಿ, ಹೆಚ್.ಎಮ್. ರಾಮಚಂದ್ರ, ಸಿ. ಚೆನ್ನಬಸವಣ್ಣ ಇದ್ದರು.</p>.<p>ಕಲಬುರ್ಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ನಡೆಯುತ್ತಿರುವ ಕಲಬುರ್ಗಿ ರಂಗೋತ್ಸವದಲ್ಲಿ ಭಾಗವಹಿಸಲು ಗೋನಾಳ್ ಅವರು ಶುಕ್ರವಾರ ಬಂದಿದ್ದರು. ಗುಲಬರ್ಗಾ ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿದ್ದರು.</p>.<p>ಶನಿವಾರ ಬೆಳಿಗ್ಗೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯೆಯೇ ಮೃತಪಟ್ಟರು. ಗೋನಾಳ್ ಅವರು 45ಕ್ಕೂ ಹೆಚ್ಚು ನಾಟಕ, ಸಿನಿಮಾ, ಧಾರಾವಾಹಿಗಳಿಗೆ ಸಂಗೀತ ಸಂಯೋಜನೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>