<p>‘ಮೈಸೂರು’ಹೆಸರಿನ ಚಿತ್ರವೊಂದು ತೆರೆಗೆ ಬರಲಿದೆ. ಅನಿವಾಸಿ ಕನ್ನಡಿಗನ ಪ್ರೇಮಕಥೆ ಆಧರಿಸಿದಸಂಗೀತಮಯ ಚಿತ್ರವಿದು. ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಉಡುಪಿ, ಭುವನೇಶ್ವರ, ಪುರಿ, ಕಟಕ್ ಕಡೆ ನಲವತ್ತು ದಿನಗಳ ಕಾಲ ಚಿತ್ರೀಕರಣ ನಡೆದಿದೆ.</p>.<p>ವಾಸುದೇವ ರೆಡ್ಡಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅವರೇ ಎಸ್.ಆರ್. ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವನ್ನು ಮಾಡಿದ್ದಾರೆ. ಜಗದೀಶ್ (ಜೆ.ಕೆ), ಕೆ.ಆರ್.ಅಪ್ಪಾಜಿ (ಕೊಡವತ್ತಿ) ಈ ಚಿತ್ರದ ಸಹ ನಿರ್ಮಾಪಕರು.</p>.<p>ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಕಲಾವಿದನಾಗಿ ಗುರುತಿಸಿಕೊಂಡಿರುವ ಜ್ಯೂನಿಯರ್ ನರಸಿಂಹರಾಜು ಅವರ ಸಾರಥ್ಯದಲ್ಲಿ ಈ ಚಿತ್ರ ತಯಾರಾಗುತ್ತಿದೆ.</p>.<p>ಸಂವಿತ್ ಈ ಚಿತ್ರದ ನಾಯಕ. ತೆಲುಗು, ಬಂಗಾಳಿ, ಭೋಜಪುರಿ ಚಿತ್ರಗಳಲ್ಲಿ ಅಭಿನಯಿಸಿರುವ ಇವರಿಗೆ ‘ಮೈಸೂರು’ ಕನ್ನಡದಲ್ಲಿ ಮೊದಲ ಚಿತ್ರ. ಪೂಜಾ ಈ ಚಿತ್ರದ ನಾಯಕಿ. ಜ್ಯೂ.ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ತಾರಾಬಳಗದಲ್ಲಿದ್ದಾರೆ.</p>.<p>ರಘು ಶಾಸ್ತ್ರಿ, ರವಿಶಂಕರ್ ನಾಗ್, ಅನಿತಾಕೃಷ್ಣ ಬರೆದಿರುವ ಹಾಡುಗಳಿಗೆ ರಮಣಿ ಸುಂದರೇಶನ್, ಅನಿತಕೃಷ್ಣ, ವಿಜಯ್ ರಾಜ್ ಸಂಗೀತ ನೀಡಿದ್ದಾರೆ.</p>.<p>ಕೃಷ್ಣ ಮಳವಳ್ಳಿ ಸಂಭಾಷಣೆ ಬರೆದಿದ್ದಾರೆ. ಭಾಸ್ಕರ್ ವಿ. ರೆಡ್ಡಿ ಛಾಯಾಗ್ರಹಣ, ಸಿದ್ದು ಭಗತ್ ಸಂಕಲನ ಹಾಗೂ ಸ್ಟಾರ್ ನಾಗಿ, ಮೈಸೂರು ರಾಜು, ಸುಧಾಕರ್ ವಸಂತ್ ಅವರ ನೃತ್ಯ,ಶ್ರೀಕಾಂತ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಮೈಸೂರು’ಹೆಸರಿನ ಚಿತ್ರವೊಂದು ತೆರೆಗೆ ಬರಲಿದೆ. ಅನಿವಾಸಿ ಕನ್ನಡಿಗನ ಪ್ರೇಮಕಥೆ ಆಧರಿಸಿದಸಂಗೀತಮಯ ಚಿತ್ರವಿದು. ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಉಡುಪಿ, ಭುವನೇಶ್ವರ, ಪುರಿ, ಕಟಕ್ ಕಡೆ ನಲವತ್ತು ದಿನಗಳ ಕಾಲ ಚಿತ್ರೀಕರಣ ನಡೆದಿದೆ.</p>.<p>ವಾಸುದೇವ ರೆಡ್ಡಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಅವರೇ ಎಸ್.ಆರ್. ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವನ್ನು ಮಾಡಿದ್ದಾರೆ. ಜಗದೀಶ್ (ಜೆ.ಕೆ), ಕೆ.ಆರ್.ಅಪ್ಪಾಜಿ (ಕೊಡವತ್ತಿ) ಈ ಚಿತ್ರದ ಸಹ ನಿರ್ಮಾಪಕರು.</p>.<p>ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳಿಂದ ಕಲಾವಿದನಾಗಿ ಗುರುತಿಸಿಕೊಂಡಿರುವ ಜ್ಯೂನಿಯರ್ ನರಸಿಂಹರಾಜು ಅವರ ಸಾರಥ್ಯದಲ್ಲಿ ಈ ಚಿತ್ರ ತಯಾರಾಗುತ್ತಿದೆ.</p>.<p>ಸಂವಿತ್ ಈ ಚಿತ್ರದ ನಾಯಕ. ತೆಲುಗು, ಬಂಗಾಳಿ, ಭೋಜಪುರಿ ಚಿತ್ರಗಳಲ್ಲಿ ಅಭಿನಯಿಸಿರುವ ಇವರಿಗೆ ‘ಮೈಸೂರು’ ಕನ್ನಡದಲ್ಲಿ ಮೊದಲ ಚಿತ್ರ. ಪೂಜಾ ಈ ಚಿತ್ರದ ನಾಯಕಿ. ಜ್ಯೂ.ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ತಾರಾಬಳಗದಲ್ಲಿದ್ದಾರೆ.</p>.<p>ರಘು ಶಾಸ್ತ್ರಿ, ರವಿಶಂಕರ್ ನಾಗ್, ಅನಿತಾಕೃಷ್ಣ ಬರೆದಿರುವ ಹಾಡುಗಳಿಗೆ ರಮಣಿ ಸುಂದರೇಶನ್, ಅನಿತಕೃಷ್ಣ, ವಿಜಯ್ ರಾಜ್ ಸಂಗೀತ ನೀಡಿದ್ದಾರೆ.</p>.<p>ಕೃಷ್ಣ ಮಳವಳ್ಳಿ ಸಂಭಾಷಣೆ ಬರೆದಿದ್ದಾರೆ. ಭಾಸ್ಕರ್ ವಿ. ರೆಡ್ಡಿ ಛಾಯಾಗ್ರಹಣ, ಸಿದ್ದು ಭಗತ್ ಸಂಕಲನ ಹಾಗೂ ಸ್ಟಾರ್ ನಾಗಿ, ಮೈಸೂರು ರಾಜು, ಸುಧಾಕರ್ ವಸಂತ್ ಅವರ ನೃತ್ಯ,ಶ್ರೀಕಾಂತ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>