<p><strong>ಬೆಂಗಳೂರು: </strong>ಕರ್ನಾಟಕದ ಬಿಜೆಪಿ ಸರ್ಕಾರದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೈಗೊಂಡಿರುವ ‘40 ಪರ್ಸೆಂಟ್ ಸರ್ಕಾರ’ ಅಭಿಯಾನಕ್ಕೆ ಒಪ್ಪಿಗೆಯನ್ನೇ ಪಡೆಯದೇ ತಮ್ಮ ಚಿತ್ರ ಬಳಸಿಕೊಳ್ಳಲಾಗಿದೆ ಎಂದು ನಟ ಅಖಿಲ್ ಅಯ್ಯರ್ ಆರೋಪಿಸಿದ್ದಾರೆ. </p>.<p>ತಮ್ಮ ಭಾವಚಿತ್ರ ಬಳಸಿ ಕಾಂಗ್ರೆಸ್ ರಚಿಸಿರುವ ಪೋಸ್ಟರ್ವೊಂದನ್ನು ಸಾಮಾಜಿಕ ಮಾಧ್ಯಮ ಟ್ವಿಟರ್ನಲ್ಲಿ ಹಂಚಿಕೊಂಡಿರುವ ಅಖಿಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. </p>.<p>‘ನನ್ನ ಚಿತ್ರವನ್ನು ಕಾನೂನುಬಾಹಿರವಾಗಿ ಮತ್ತು ನನ್ನ ಒಪ್ಪಿಗೆಯಿಲ್ಲದೆ ‘40% ಸರ್ಕಾರ’ ಅಭಿಯಾನಕ್ಕಾಗಿ ಬಳಸುತ್ತಿರುವುದನ್ನು ಕಂಡು ನಾನು ದಿಗ್ಭ್ರಮೆಗೊಂಡಿದ್ದೇನೆ. ಕಾಂಗ್ರೆಸ್ನ ಈ ಅಭಿಯಾನಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಐಎನ್ಸಿ ಕರ್ನಾಟಕ ದಯವಿಟ್ಟು ಈ ಬಗ್ಗೆ ಗಮನಹರಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಕಾಂಗ್ರೆಸ್, ‘40 ಪರ್ಸೆಂಟ್ ಸರ್ಕಾರ’ ಎಂದು ಟೀಕೆ ಮಾಡಿದೆ. ಇದೇ ಹ್ಯಾಷ್ಟ್ಯಾಗ್ ಅಡಿಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲೂ ಅಭಿಯಾನ ನಡೆಸುತ್ತಿದೆ.</p>.<p>ಹಿಂದಿಯ ಕೆಲ ಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ಅಖಿಲ್ ಅಯ್ಯರ್ ನೀಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕರ್ನಾಟಕದ ಬಿಜೆಪಿ ಸರ್ಕಾರದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೈಗೊಂಡಿರುವ ‘40 ಪರ್ಸೆಂಟ್ ಸರ್ಕಾರ’ ಅಭಿಯಾನಕ್ಕೆ ಒಪ್ಪಿಗೆಯನ್ನೇ ಪಡೆಯದೇ ತಮ್ಮ ಚಿತ್ರ ಬಳಸಿಕೊಳ್ಳಲಾಗಿದೆ ಎಂದು ನಟ ಅಖಿಲ್ ಅಯ್ಯರ್ ಆರೋಪಿಸಿದ್ದಾರೆ. </p>.<p>ತಮ್ಮ ಭಾವಚಿತ್ರ ಬಳಸಿ ಕಾಂಗ್ರೆಸ್ ರಚಿಸಿರುವ ಪೋಸ್ಟರ್ವೊಂದನ್ನು ಸಾಮಾಜಿಕ ಮಾಧ್ಯಮ ಟ್ವಿಟರ್ನಲ್ಲಿ ಹಂಚಿಕೊಂಡಿರುವ ಅಖಿಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. </p>.<p>‘ನನ್ನ ಚಿತ್ರವನ್ನು ಕಾನೂನುಬಾಹಿರವಾಗಿ ಮತ್ತು ನನ್ನ ಒಪ್ಪಿಗೆಯಿಲ್ಲದೆ ‘40% ಸರ್ಕಾರ’ ಅಭಿಯಾನಕ್ಕಾಗಿ ಬಳಸುತ್ತಿರುವುದನ್ನು ಕಂಡು ನಾನು ದಿಗ್ಭ್ರಮೆಗೊಂಡಿದ್ದೇನೆ. ಕಾಂಗ್ರೆಸ್ನ ಈ ಅಭಿಯಾನಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಐಎನ್ಸಿ ಕರ್ನಾಟಕ ದಯವಿಟ್ಟು ಈ ಬಗ್ಗೆ ಗಮನಹರಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಕಾಂಗ್ರೆಸ್, ‘40 ಪರ್ಸೆಂಟ್ ಸರ್ಕಾರ’ ಎಂದು ಟೀಕೆ ಮಾಡಿದೆ. ಇದೇ ಹ್ಯಾಷ್ಟ್ಯಾಗ್ ಅಡಿಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲೂ ಅಭಿಯಾನ ನಡೆಸುತ್ತಿದೆ.</p>.<p>ಹಿಂದಿಯ ಕೆಲ ಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ಅಖಿಲ್ ಅಯ್ಯರ್ ನೀಟಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>