<p>ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವು ನಾಡಗೀತೆ, ವಂದೇಮಾತರಂ ನುಡಿಸುವಿಕೆಯಲ್ಲಿ ಯಾವುದು ಮೊದಲು ಎಂಬ ಗೊಂದಲ ಉಂಟಾಯಿತು.</p>.<p>‘ವಂದೇ ಮಾತರಂ’ ನುಡಿಸಲಾಗುತ್ತಿದ್ದು ಎಲ್ಲರೂ ಎದ್ದು ನಿಲ್ಲುವಂತೆ, ಕಾರ್ಯಕ್ರಮ ನಿರ್ವಹಣೆ ಮಾಡುತ್ತಿದ್ದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿನಂತಿಸಿದರು. ಆಗ, ‘ಜಯ ಭಾರತ ಜನನಿಯ ತನುಜಾತೆ’ ಎಂದು ನಾಡಗೀತೆಯ ಒಂದೆರಡು ಚರಣ ತೂರಿಬಂತು. ತಕ್ಷಣ ಅದನ್ನು ಸ್ಥಗಿತಗೊಳಿಸಿ, ‘ವಂದೇ ಮಾತರಂ’ ಹಾಡಲಾಯಿತು.</p>.<p>ಕಾರ್ಯಕ್ರಮದ ಆರಂಭ ಮತ್ತು ಕೊನೆಯಲ್ಲಿ ‘ವಂದೇ ಮಾತರಂ’ ಪೂರ್ಣ ಗೀತೆ ಹಾಡಲಾಯಿತು.</p>.<p>ತಾರೆಯರ ಮೆರುಗು: ನಟ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಮಾಜಿ ಸಂಸದೆ, ನಟಿ ರಮ್ಯಾ, ನಟ ಡಾಲಿ ಧನಂಜಯ್, ನಟಿಯರಾದ ರಾಗಿಣಿ ದ್ವಿವೇದಿ, ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ನಟರು, ನಿರ್ದೇಶಕರು, ಸಂಗೀತ ನಿರ್ದೇಶಕರು, ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-51-1669976954</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವು ನಾಡಗೀತೆ, ವಂದೇಮಾತರಂ ನುಡಿಸುವಿಕೆಯಲ್ಲಿ ಯಾವುದು ಮೊದಲು ಎಂಬ ಗೊಂದಲ ಉಂಟಾಯಿತು.</p>.<p>‘ವಂದೇ ಮಾತರಂ’ ನುಡಿಸಲಾಗುತ್ತಿದ್ದು ಎಲ್ಲರೂ ಎದ್ದು ನಿಲ್ಲುವಂತೆ, ಕಾರ್ಯಕ್ರಮ ನಿರ್ವಹಣೆ ಮಾಡುತ್ತಿದ್ದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿನಂತಿಸಿದರು. ಆಗ, ‘ಜಯ ಭಾರತ ಜನನಿಯ ತನುಜಾತೆ’ ಎಂದು ನಾಡಗೀತೆಯ ಒಂದೆರಡು ಚರಣ ತೂರಿಬಂತು. ತಕ್ಷಣ ಅದನ್ನು ಸ್ಥಗಿತಗೊಳಿಸಿ, ‘ವಂದೇ ಮಾತರಂ’ ಹಾಡಲಾಯಿತು.</p>.<p>ಕಾರ್ಯಕ್ರಮದ ಆರಂಭ ಮತ್ತು ಕೊನೆಯಲ್ಲಿ ‘ವಂದೇ ಮಾತರಂ’ ಪೂರ್ಣ ಗೀತೆ ಹಾಡಲಾಯಿತು.</p>.<p>ತಾರೆಯರ ಮೆರುಗು: ನಟ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಮಾಜಿ ಸಂಸದೆ, ನಟಿ ರಮ್ಯಾ, ನಟ ಡಾಲಿ ಧನಂಜಯ್, ನಟಿಯರಾದ ರಾಗಿಣಿ ದ್ವಿವೇದಿ, ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ನಟರು, ನಿರ್ದೇಶಕರು, ಸಂಗೀತ ನಿರ್ದೇಶಕರು, ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-51-1669976954</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>