ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಕ್ರವರ್ತಿ ಚಂದ್ರಚೂಡ್ ನಿರ್ದೇಶನದ ‘ಪಾದರಾಯ’ಕ್ಕೆ ನಾಗಶೇಖರ್‌ ಹೀರೊ

Last Updated 8 ಡಿಸೆಂಬರ್ 2022, 14:09 IST
ಅಕ್ಷರ ಗಾತ್ರ

ಚಕ್ರವರ್ತಿ ಚಂದ್ರಚೂಡ್ ಮತ್ತೆ ನಿರ್ದೇಶನಕ್ಕೆ ಇಳಿದಿದ್ದಾರೆ. ಹನುಮ ಜಯಂತಿಯಂದೇ ತಮ್ಮ ಮೊದಲ ಪ್ಯಾನ್ ಇಂಡಿಯಾ ಸಿನಿಮಾದ ಶೀರ್ಷಿಕೆಯನ್ನು ಅನಾವರಣ ಮಾಡಿದ್ದಾರೆ. ಚಿತ್ರಕ್ಕೆ ‘ಪಾದರಾಯ’ ಎಂಬ ಟೈಟಲ್ ಇಡಲಾಗಿದ್ದು, ಈ ಚಿತ್ರವನ್ನು ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು ಅವರು ನಿರ್ಮಾಣ ಮಾಡಲಿದ್ದಾರೆ.

ಚಿತ್ರದಲ್ಲಿ ‘ಮೈನಾ’, ‘ಸಂಜು ವೆಡ್ಸ್ ಗೀತಾ’ ಸಿನಿಮಾ ಖ್ಯಾತಿಯ ನಿರ್ದೇಶಕ ನಾಗಶೇಖರ್ ನಾಯಕ ನಟನಾಗಿ ನಟಿಸಲಿದ್ದಾರೆ. ನೈಜ ಘಟನೆ ಆಧರಿಸಿದ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರ ಏಕಕಾಲದಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂನಲ್ಲಿ ನಿರ್ಮಾಣವಾಗಿ ಬಿಡುಗಡೆಯಾಗಲಿದೆ. ನಾಗಶೇಖರ್ ಚಿತ್ರಕ್ಕೆ ಸಹ ನಿರ್ಮಾಪಕ ಕೂಡ ಆಗಿದ್ದಾರೆ.

‘ಪಾದರಾಯ’ ಎಂದರೆ ಹನುಮಂತ. ಅಂಜನಾದ್ರಿ ಸುತ್ತಮುತ್ತ ನಡೆಯುವ ಕಥೆ ಚಿತ್ರಲ್ಲಿದೆ. 2013-14ರಲ್ಲಿ ನಡೆದ ನೈಜ ಘಟನೆ ಆಧರಿಸಿದ ಸಿನಿಮಾ ಇದಾಗಿದೆ. ಈ ಘಟನೆ ಆರು ರಾಜ್ಯಕ್ಕೆ ಸಂಬಂಧಿಸಿದ್ದು, ಯೂನಿವರ್ಸಲ್ ಸಬ್ಜೆಕ್ಟ್ ಆಗಿರುವ ಕಾರಣ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದೇವೆ. ಶಾಲಿನಿ ಆರ್ಟ್ಸ್ ಬ್ಯಾನರ್‌ನಡಿ ಜಾಕ್ ಮಂಜು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ನಾಯಕಿ ಹುಡುಕಾಟದಲ್ಲಿದ್ದೇವೆ. ಜನವರಿಯಲ್ಲಿ ಚಿತ್ರೀಕರಣ ಆರಂಭಿಸಲಿದ್ದೇವೆ. ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಹಂಚಿಕೊಳ್ಳುತ್ತೇನೆ ಎಂದಿದ್ದಾರೆ ಚಕ್ರವರ್ತಿ ಚಂದ್ರಚೂಡ್.

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ತಮಿಳು ಚಿತ್ರರಂಗದ ಹೆಸರಾಂತ ಸಂಕಲನಕಾರ ಆಂಟೋನಿ ಚಿತ್ರದ ಸಂಕಲನ ಜವಾಬ್ದಾರಿ ಹೊತ್ತಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ ಚಿತ್ರಕ್ಕಿರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT