‘ರಾಜ ಅಜ್ಜಿಯ ಮುದ್ದಿನ ಮೊಮ್ಮಗನಾಗಿದ್ದು, ಎಲ್ಲರ ಕಷ್ಟಕ್ಕೆ ಸ್ಪಂದಿಸುತ್ತಾನೆ. ನಾಯಕಿ ಹಾಗೂ ಆಕೆಯ ಮನೆಯವರು ಸಂಕಷ್ಟಕ್ಕೆ ಸಿಲುಕಿದಾಗ ಸಹಾಯ ಮಾಡಲು ಹೋಗಿ ತಾನೆ ಕಷ್ಟಕ್ಕೆ ಸಿಲುಕುತ್ತಾನೆ. ಆನಂತರ ಮುಂದೇನು ಎಂಬುದೇ ಚಿತ್ರದ ತಿರುಳು.ಈಗಾಗಲೇ 35 ದಿನ ಚಿತ್ರೀಕರಣ ಮಾಡಲಾಗಿದೆ’ ಎನ್ನುತ್ತಾರೆ ಶಿವಾರ. ಈ ಸಿನಿಮಾಕ್ಕೆನಿರ್ಮಾಪಕ ಎಲ್.ಆನಂದ್ ಬಂಡವಾಳ ಹೂಡಿದ್ದಾರೆ. ತಾರಾಗಣದಲ್ಲಿ ಎಂ.ಎಸ್.ಉಮೇಶ್, ಮಾಲತಿಶ್ರೀ,ಕುರಿ ಪ್ರತಾಪ್, ಟೆನಿಸ್ ಕೃಷ್ಣ, ಹಂಸರಾಜ್, ಆರ್ಯ, ದತ್ತ, ಲಕ್ಷ್ಮೀ, ಮೋಹನ್ ಜುನೇಜ್ ಇದ್ದಾರೆ.