ಹೇಮಂತ್ ಹೆಗಡೆ ಮಾತನಾಡಿ, ‘ಎರಡು ವರ್ಷಗಳ ನಂತರ ಮತ್ತೆ ಚಿತ್ರ ಮಾಡುತ್ತಿದ್ದೇನೆ. ಮಲೆನಾಡು ಹುಡುಗನ ಕಥೆ ಇದು. ಮಲೆನಾಡಿನಲ್ಲಿ ಕೃಷಿ ಮಾಡುವ ಹುಡುಗರಿಗೆ ಹುಡುಗಿ ಸಿಗುವುದಿಲ್ಲ. ಜ್ವಲಂತ ಸಮಸ್ಯೆಯೊಂದನ್ನು ಇಟ್ಟುಕೊಂಡು, ಅದನ್ನು ಹಾಸ್ಯದ ಮೂಲಕ ಹೇಳುವುದಕ್ಕೆ ಹೊರಟಿದ್ದೇನೆ. ನನ್ನ ಸಹೋದರ ಸಂಬಂಧಿ, ಮದುವೆಯಾಗುವುದಕ್ಕೆ ಕಾಶ್ಮೀರದವರೆಗೂ ಹೋಗಿ ಬಂದ. ಸಾಮಾಜಿಕ ಸಂದೇಶವಿರುವ ಸುಂದರ ಚಿತ್ರ ಇದಾಗಲಿದೆ ಎಂಬ ನಂಬಿಕೆ ನನಗಿದೆ. ಜನ ತಮ್ಮನ್ನು ತಾವು ಕಂಡುಕೊಳ್ಳುತ್ತಾರೆ’ ಎಂದರು.