ಸಮರ್ಥ್ ಕಡ್ಕೋಳ್ ನಿರ್ದೇಶನ ಮಾಡುತ್ತಿರುವ ಈ ಸಿನಿಮಾವನ್ನು ಗುರುದತ್ ಗಾಣಿಗ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಸಮರ್ಥ್ ಕೂಡ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ವಿಶೇಷವಾದ ಕಥಾವಸ್ತು ಹೊಂದಿದೆ. ಯಲಹಂಕ ಬಳಿಯ ಐಷಾರಾಮಿ ಅಪಾರ್ಟ್ಮೆಂಟ್ ಒಂದರಲ್ಲಿ ಈ ಸಿನಿಮಾದ ಚಿತ್ರೀಕರಣ ಶುಕ್ರವಾರದಿಂದ ಆರಂಭವಾಗಿದೆ. ದಿಗಂತ್ಗೆ ಜೋಡಿಯಾಗಿ ನಾಯಕಿ ಧನು ಹರ್ಷ ನಟಿಸುತ್ತಿದ್ದಾರೆ. ಅಭಿಮನ್ಯು ಸದಾನಂದ್ ಛಾಯಾಗ್ರಾಹಣ, ರಾಹುಲ್ ವಿ. ಪಾರ್ತವಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಚಿತ್ರಕ್ಕಿದೆ.