ಅದ್ದೂರಿ ಸೆಟ್ ಇಲ್ಲ: ‘ಮದುವೆ ಕಾರ್ಯಕ್ಕಾಗಿ 90ರಿಂದ 95 ಎಕರೆ ಜಾಗವನ್ನು ಬಳಸಿಕೊಳ್ಳಲಾಗುತ್ತಿದೆ.
ಅದ್ದೂರಿ ಸೆಟ್ ಹಾಕುವುದಿಲ್ಲ. ಆದರೆ ನನ್ನೆಲ್ಲ ಲಕ್ಷಾಂತರ ಕಾರ್ಯಕರ್ತರು, ಹಿತೈಷಿಗಳು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ ದೊಡ್ಡ ಮಟ್ಟದ ಕಾರ್ಯಕ್ರಮವೇ ಆಗಿರಲಿದೆ. ಮುಹೂರ್ತದ ಕಾರ್ಯಕ್ರಮ ಇಲ್ಲಿ ನಡೆಯಲಿದೆ. ಆರತಕ್ಷತೆ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಮಾಡಬೇಕು ಎಂಬುದು ಹಲವರ ಅಭಿಪ್ರಾಯ. ಈ ಬಗ್ಗೆ ಇನ್ನೆರಡು ದಿನದಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಮಾಹಿತಿ ನೀಡಿದರು.