ಬೆಂಗಳೂರು: ನಟ ಹಾಗೂ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ್ ಅವರು ಇಂದು (ಶನಿವಾರ) 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಹುಟ್ಟುಹಬ್ಬದ ಅಂಗವಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಸೇರಿದಂತೆ ಅನೇಕರು ಟ್ವಿಟರ್ನಲ್ಲಿ ಶುಭ ಹಾರೈಸಿದ್ದಾರೆ.
‘ಪ್ರೀತಿಯ ಪುತ್ರ, ಗೆಳೆಯನಂತಹ ಆಪ್ತ ಹಾಗೂ ರಾಜ್ಯ ಯುವ ಜನತಾದಳ ಅಧ್ಯಕ್ಷರೂ ಆಗಿರುವ ನಿಖಿಲ್ ಅವರಿಗೆ ಜನ್ಮದಿನದ ಶುಭ ಹಾರೈಕೆಗಳು. ಕಂದ, ನಿನ್ನೆಲ್ಲ ಕನಸುಗಳು ಈಡೇರಲಿ. ಆ ಭಗವಂತ ನಿನಗೆ ಎಲ್ಲವನ್ನೂ ಒಳ್ಳೆಯದೇ ಮಾಡಲಿ ಎಂದು ಆಶೀರ್ವದಿಸುತ್ತೇನೆ’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
‘ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಯುವ ಜನತಾದಳದ ರಾಜ್ಯಾಧ್ಯಕ್ಷರಾದ ಆತ್ಮೀಯ ಸಹೋದರ ನಿಖಿಲ್ ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮ್ಮೆಲ್ಲ ಇಷ್ಟಾರ್ಥಗಳು ಈಡೇರಲಿ, ಭಗವಂತನು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಸಂಸದ ಪ್ರಜ್ವಲ್ ರೇವಣ್ಣ ಟ್ವೀಟ್ ಮಾಡಿದ್ದಾರೆ.
‘ಕೋವಿಡ್ ಸಂಕಷ್ಟದ ಸಮಯದಲ್ಲಿ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಹಾಗಾಗಿ ಈ ವರ್ಷ ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ. ಅಭಿಮಾನಿಗಳು, ಕಾರ್ಯಕರ್ತರು ಕೋವಿಡ್ ಸಂಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ತಾವಿದ್ದಲ್ಲಿಂದಲೇ ನನಗೆ ಹರಸಿ. ಒಂದು ಅರ್ಥಪೂರ್ಣ ಆಚರಣೆಗೆ ಕೈಜೋಡಿಸಿ’ ಎಂದು ನಿಖಿಲ್ ಇತ್ತೀಚಿಗೆ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿದ್ದರು.
ನಿಖಲ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ರೈಡರ್’ ಬಿಡುಗಡೆಗೆ ಸಿದ್ಧವಾಗಿದೆ.
ಪ್ರೀತಿಯ ಪುತ್ರ, ಗೆಳೆಯನಂಥ ಆಪ್ತ ಹಾಗೂ ರಾಜ್ಯ ಯುವ ಜನತಾದಳ ಅಧ್ಯಕ್ಷರೂ ಆಗಿರುವ @Nikhil_Kumar_k ಅವರಿಗೆ ಜನ್ಮದಿನದ ಶುಭ ಹಾರೈಕೆಗಳು.
— H D Kumaraswamy (@hd_kumaraswamy) January 22, 2022
ಕಂದ, ನಿನ್ನೆಲ್ಲ ಕನಸುಗಳು ಈಡೇರಲಿ. ಆ ಭಗವಂತ ನಿನಗೆ ಎಲ್ಲವನ್ನೂ ಒಳ್ಳೆಯದೇ ಮಾಡಲಿ ಎಂದು ಆಶೀರ್ವದಿಸುತ್ತೇನೆ. pic.twitter.com/2k7XNqahHr
ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಯುವ ಜನತಾದಳದ ರಾಜ್ಯಾಧ್ಯಕ್ಷರಾದ ಆತ್ಮೀಯ ಸಹೋದರ ಶ್ರೀ ನಿಖಿಲ್ ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು.
— Prajwal Revanna (@iPrajwalRevanna) January 22, 2022
ನಿಮ್ಮೆಲ್ಲಾ ಇಷ್ಟಾರ್ಥಗಳು ಈಡೇರಲಿ, ಭಗವಂತನು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ. @Nikhil_Kumar_k pic.twitter.com/yf9dUm3SBS
ಕೋವಿಡ್ ಸಂಕಷ್ಟದ ಸಮಯದಲ್ಲಿ ಅದ್ಧೂರಿ ಹುಟ್ಟುಹಬ್ಬದ ಆಚರಣೆಗೆ ನನ್ನ ಮನಸ್ಸು ಒಪ್ಪುತ್ತಿಲ್ಲ. ಹಾಗಾಗಿ ಈ ವರ್ಷ ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿಲ್ಲ. ಅಭಿಮಾನಿಗಳು, ಕಾರ್ಯಕರ್ತರು ಕೋವಿಡ್ ಸಂಕಷ್ಟದಲ್ಲಿರುವವರಿಗೆ ತಮ್ಮ ಕೈಲಾದ ಸಹಾಯ ಮಾಡುವ ಮೂಲಕ ತಾವಿದ್ದಲ್ಲಿಂದಲೇ ನನಗೆ ಹರಸಿ. ಒಂದು ಅರ್ಥಪೂರ್ಣ ಆಚರಣೆಗೆ ಕೈಜೋಡಿಸಿ🙏
— Nikhil Kumar (@Nikhil_Kumar_k) January 20, 2022
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.